ಹೊಸಪೇಟೆ ಬಳಿ ಭೀಕರ ಅಪಘಾತ ; 7 ಜನರು ಸಾವು

ಹೊಸಪೇಟೆ : ಹೊಸಪೇಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಅವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದ ಹೊರವಲಯದ ಸುರಂಗದ ಸಮೀಪ ಎರಡು ಮೈನಿಂಗ್‌ ಟಿಪ್ಪರ್ ಲಾರಿಗಳು ಹಾಗೂ ಕ್ರೂಸರ್‌ ನಡುವೆ ಅಪಘಾತ ಸಂಭವಿಸಿದೆ. ಒಂದು ಮೈನಿಂಗ್‌ ಟಿಪ್ಪರ್‌ ಲಾರಿ ಹೆದ್ದಾರಿ ಪಕ್ಕದ ಗುಂಡಿಗೆ ಉರುಳಿಬಿದ್ದಿದೆ. ಡಿಕ್ಕಿಯ ರಭಸಕ್ಕೆ ಕ್ರೂಸರ್‌ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕ್ರೂಸರ್‌ನಲ್ಲಿ ಸಿಲುಕಿರುವ ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಮಾಡಬೇಕಾಯಿತು.

ಕ್ರೂಸರ್‌ ವಾಹನದಲ್ಲಿ ಒಟ್ಟು 13 ಜನರಿದ್ದರು ಎಂದು ವರದಿಯಾಗಿದೆ. ಮೃತರನ್ನು ಕೆಂಚವ್ವ, ಉಮಾ, ಭಾಗ್ಯ, ಅನಿಲ, ಗೋಣಿ ಬಸಪ್ಪ, ಭೀಮಲಿಂಗಪ್ಪ, ಬಾಲಕ ಯುವರಾಜ ಎಂದು ಗುರುತಿಸಲಾಗಿದೆ.
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿ ಗೋಣಿಬಸವೇಶ್ವರ ದೇವಸ್ಥಾನಕ್ಕೆ ಹೋಗಿ ಹಿಂತಿರುಗಿ ಬರುವಾಗ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಅವಘಢ ಸ್ಥಳದಲ್ಲಿ ವಿಜಯನಗರ ಎಸ್‌ಪಿ ಶ್ರೀಹರಿ ಬಾಬು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳೀಯರು ಪೊಲೀಸರ ಕಾರ್ಯಾಚರಣೆಗೆ ಸಹಕರಿಸಿದರು.
ಮೃತಪಟ್ಟವರೆಲ್ಲಾ ಹೊಸಪೇಟೆ ನಗರದವರಾಗಿದ್ದಾರೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮೇ 10ರ ವರೆಗೆ ಮಳೆ ಮುನ್ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement