ಕೆಪಿಸಿಸಿ ವಕ್ತಾರರಾಗಿ ಆಯನೂರು ಮಂಜುನಾಥ ನೇಮಕ

ಬೆಂಗಳೂರು : ಒಂದು ತಿಂಗಳ ಹಿಂದಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಆಯನೂರು ಮಂಜುನಾಥ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.
ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಆದೇಶ ಹೊರಡಿಸಿದ್ದು, ಆಯನೂರು ಮಂಜುನಾಥ ಅವರು ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ರಾಜಕೀಯ ಸಾಮಾಜಿಕ ವಿಷಯಗಳ ಬಗ್ಗೆ ಚರ್ಚೆಯಲ್ಲಿ ಹೆಚ್ಚು ಪ್ರಚಾರದಲ್ಲಿರುವುದನ್ನು ಗಮನಿಸಿ ಕಾಂಗ್ರೆಸ್ ಪಕ್ಷದ ವಿಚಾರಧಾರಣೆಗಳನ್ನು ಮತ್ತು ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಮಾಧ್ಯಮಗಳಲ್ಲಿ ಬಿಂಬಿಸಲು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ” ಎಂದು ಹೇಳಿದ್ದಾರೆ.
ತಮಗೆ ನೀಡಿರುವ ಈ ಜವಾಬ್ದಾರಿ ವಹಿಸಿಕೊಂಡು ಕೆಪಿಸಿಸಿ ಸಂವಹನ ಮತ್ತು ಮಾಧ್ಯಮ ಮುಖ್ಯಸ್ಥರು ನೀಡುವ ಮಾರ್ಗದರ್ಶನಗಳಂತೆ ಹಾಗೂ ಬಲವರ್ಧನೆಗೆ ಸಹಕಾರಿಯಾಗುವಂತೆ ಕಾರ್ಯಪ್ರವೃತ್ತರಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ತಿಳಿಸಿದ್ದಾರೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement