ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದ ಮಾಜಿ ಶಾಸಕ ರಾಮಪ್ಪ ಲಮಾಣಿ

ಬೆಂಗಳೂರು: ಮುಂಬರುವ ಲೋಕಸಬೆ ಚುನಾವಣೆಗೆ ತಯಾರಿ ನಡೆಸಿರುವ ಕಾಂಗ್ರೆಸ್​ ಆಪರೇಷನ್​ ಹಸ್ತದ ಮೂಲಕ ಹಲವು ಬಿಜೆಪಿ ಹಾಗೂ ಜೆಡಿಎಸ್​ ನಾಯಕರನ್ನು ಪಕ್ಷಕ್ಕೆ ಕರೆತರುತ್ತಿದೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಆಪರೇಷನ್ ಹಸ್ತದ ಮೂಲಕ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಗೆ ಕಾಂಗ್ರೆಸ್​ ಶಾಕ್​ ನೀಡಿದೆ.
ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ರಾಮಪ್ಪ ಲಮಾಣಿ ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ. ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಮಾಜಿ ಮುಖ್ಯಮಂತ್ರಿ ಜಗದೀಶ​ ಶೆಟ್ಟರ, ಮಾಜಿ ಡಿಸಿಎಂ ಲಕ್ಷ್ಮಣ​ ಸವದಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ.
ಬಿಜೆಪಿಯಲ್ಲಿ ಆಗಿರುವ ನೋವಿನಿಂದ ಪಕ್ಷ ತೊರೆದು ಯಾವುದೇ ಷರತ್ತು ಇಲ್ಲದೇ ನಾನು ಇಂದು ಕಾಂಗ್ರೆಸ್​ ಸೇರಿದ್ದೇನೆ. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ನಾಯಕರು ಯಾರನ್ನು ಅಭ್ಯರ್ಥಿಯನ್ನಾಗಿ ಮಾಡುತ್ತಾರೋ ಅವರ ಗೆಲುವಿಗಾಗಿ ಶ್ರಮಿಸುತ್ತೇನೆ ಎಂದು ರಾಮಪ್ಪ ಲಮಾಣಿ ಹೇಳಿದ್ದಾರೆ.
ಸಚಿವ ಎಚ್​.ಕೆ. ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್​ ಮೊದಲಾದವರು ಉಪಸ್ಥಿತರಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement