ನವದೆಹಲಿ: ಇಸ್ರೇಲಿನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಆರಂಭಿಸಲಾಗಿರುವ ‘ಆಪರೇಷನ್ ಅಜಯ’ ಕಾರ್ಯಾಚರಣೆಯ ವಿಶೇಷ ವಿಮಾನದಲ್ಲಿ ಎರಡನೇ ತಂಡ ಇಂದು ಮುಂಜಾನೆ ಯುದ್ಧ ಪೀಡಿತ ಇಸ್ರೇಲ್ನಿಂದ ಸುರಕ್ಷಿತವಾಗಿ ಭಾರತಕ್ಕೆ ಬಂದಿಳಿದಿದೆ.
ಎರಡು ಶಿಶುಗಳು ಸೇರಿದಂತೆ 235 ಭಾರತೀಯರನ್ನು ಹೊತ್ತ ವಿಮಾನ ಶನಿವಾರ ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಬಂದಿಳಿದಿದೆ.
ಪ್ಯಾಲೇಸ್ಟಿನಿಯನ್ ಉಗ್ರಗಾಮಿ ಗುಂಪು ಹಮಾಸ್ ಇಸ್ರೇಲ್ ಮೇಲೆ ದಾಳಿ ನಡೆಸಿದ ಬಳಿಕ ಆರಂಭವಾದ ಯುದ್ದದ ಬಳಿಕ ಇಸ್ರೇಲ್ ನಲ್ಲಿ ಸಾವಿರಾರು ಭಾರತೀಯರು ಸಿಲುಕಿಕೊಂಡಿದ್ದರು ಆ ಬಳಿಕ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರುವ ನಿಟ್ಟಿನಲ್ಲಿ ‘ಆಪರೇಷನ್ ಅಜಯ’ ಅಡಿಯಲ್ಲಿ ಕಾರ್ಯಾಚರಣೆ ನಡೆಸಲು ಸರ್ಕಾರ ಮುಂದಾಗಿದೆ ಇದರ ಮೊದಲ ಭಾಗವಾಗಿ ಇಸ್ರೇಲ್ನಿಂದ 212 ಭಾರತೀಯ ಪ್ರಜೆಗಳನ್ನು ಹೊತ್ತ ವಿಶೇಷ ವಿಮಾನ ಶುಕ್ರವಾರ ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು.
ಅದರ ಮುಂದುವರೆದ ಭಾಗವಾಗಿ ಎರಡನೇ ವಿಮಾನ 235 ಭಾರತೀಯರ ಹೊತ್ತ ವಿಮಾನ ಶನಿವಾರ ಮುಂಜಾನೆ ದೆಹಲಿಗೆ ಬಂದಿಳಿದಿದೆ.
ನಿಮ್ಮ ಕಾಮೆಂಟ್ ಬರೆಯಿರಿ