ಬಸ್ – ಟಾಟಾ ಸುಮೋ ಡಿಕ್ಕಿ: ಸ್ಥಳದಲ್ಲೇ ಐವರು ಸಾವು, ನಾಲ್ವರಿಗೆ ಗಂಭೀರ ಗಾಯ

ಗದಗ: ಸಾರಿಗೆ ಸಂಸ್ಥೆ ಬಸ್ ಹಾಗೂ ಟಾಟಾ ಸುಮೋ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್‌ ಪಟ್ಟದ ಸಮೀಪ ನಿಡಗುಂದಿಕೊಪ್ಪ ಕ್ರಾಸ್ ಬಳಿ‌ ಸೋಮವಾರ ನಡೆದಿದೆ ಎಂದು ವರದಿಯಾಗಿದೆ.
ಅಪಘಾತದಲ್ಲಿ ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಕಲಬುರಗಿಯ ಆಳಂದ ತಾಲೂಕಿನ ಮಾದನಹಿಪ್ಪರಗಿ ಹಾಗೂ ಅಫಜಲಪುರದಿಂದ ಶಿರಹಟ್ಟಿ ಫಕ್ಕೀರೇಶ್ವರ ಮಠದ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಟಾಟಾ ಸುಮೋ ವಾಹನದ ಹಿಂಬದಿಯ ಟೈರ್ ಸ್ಪೋಟಗೊಂಡು ಎದುರಿಗೆ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಟಾಟಾ ಸುಮೋ ವಾಹನದಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಮಾದನ ಹಿಪ್ಪರಗಿಯ ಶಿವಕುಮಾರ ಕಲಶೆಟ್ಟಿ (50), ಚಂದ್ರಕಲಾ (42), ರಾಣಿ (32) ಹಾಗೂ ಅಪ್ಜಲಪೂರದ ದ್ರಾಕ್ಷಾಯಣಿ ಕತ್ತಿ (33), ಅಫ್ಜಲಪುರದ ಸಚಿನ್ ಕತ್ತಿ (31) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್‌ನಲ್ಲಿದ್ದವರಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement