ಮೈಸೂರು : ಪ್ರೊ.ಕೆ.ಎಸ್.ಭಗವಾನ್ ವಿರುದ್ಧ ದೂರು ದಾಖಲು

ಮೈಸೂರು : ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಪ್ರೊ.ಕೆ.ಎಸ್.ಭಗವಾನ್ ವಿರುದ್ಧ ಮೈಸೂರಿನಲ್ಲಿ ದೂರು ದಾಖಲಾಗಿದೆ.
ಮೈಸೂರಿನ ದೇವರಾಜ ಠಾಣೆಯಲ್ಲಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘವು ಪ್ರೊ.ಕೆ.ಎಸ್.ಭಗವಾನ್ ವಿರುದ್ಧ ದೂರು ದಾಖಲಿಸಿದೆ.
ಭಗವಾನ್ ದುರುದ್ದೇಶಪೂರ್ವಕವಾಗಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಜಾತಿ- ಜಾತಿಗಳ ನಡುವೆ ವೈಷಮ್ಯ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಒಕ್ಕಲಿಗರ ಸಂಘ ಆರೋಪಿಸಿ ದೂರು ನೀಡಿದೆ.
ಭಗವಾನ್ ಅವರನ್ನು ಬಂಧಿಸಬೇಕು. ಅವರಿಗೆ ವಿಶ್ವವಿದ್ಯಾನಿಲಯ ನೀಡುವ ಸವಲತ್ತುಗಳನ್ನ ನಿಲ್ಲಿಸಬೇಕು ಎಂದು ಸಂಘಟನೆ ಆಗ್ರಹಿಸಿದೆ. ಅಕ್ಟೋಬರ್ 13 ರಂದು ನಡೆದ ಮಹಿಷಾ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರೊ. ಭಗವಾನ್, ಒಕ್ಕಲಿಗರು ಸಂಸ್ಕೃತಿ ಹೀನರು ಎಂಬ ಪದ ಬಳಕೆ ಮಾಡಿದ್ದರು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಮ ಸಮಾಜ ನಿರ್ಮಾಣ, ಅಂತರಂಗ-ಬಹಿರಂಗ ಶುದ್ಧಿಯಿಂದ ಜಗಜ್ಯೋತಿಯಾದ ಕಾಯಕಯೋಗಿ ವಿಶ್ವಗುರು ಬಸವಣ್ಣ...

ನಿಮ್ಮ ಕಾಮೆಂಟ್ ಬರೆಯಿರಿ

advertisement