ಇಸ್ರೇಲ್-ಹಮಾಸ್ ಯುದ್ಧ: ಪ್ಯಾಲೆಸ್ತೀನ್‌ಗೆ ಮಾನವೀಯ ನೆರವು ಕಳುಹಿಸಿದ ಭಾರತ

ನವದೆಹಲಿ: ಯುದ್ಧಪೀಡಿತ ಗಾಜಾಕ್ಕೆ ಜಗತ್ತಿನಾದ್ಯಂತ ನೆರವು ಹರಿದು ಬರುತ್ತಿದ್ದು, ಮಾನವೀಯ ಆಧಾರದ ಮೇಲೆ ಭಾರತ ಕೂಡ ವೈದ್ಯಕೀಯ ನೆರವು ಮತ್ತು ವಿಪತ್ತು ಪರಿಹಾರದ ವಸ್ತುಗಳನ್ನು ರವಾನಿಸಿದೆ.
ಅಕ್ಟೋಬರ್‌ 7ರಂದು ಹಮಾಸ್​ ಉಗ್ರರು ಗಾಜಾದಿಂದ ಇಸ್ರೇಲ್​ ಮೇಲೆ 5 ಸಾವಿರ ರಾಕೆಟ್​ಗಳ ಮೂಲಕ ದಾಳಿ ಮಾಡಿ ಇಸ್ರೇಲ್​ನಲ್ಲಿ ಮಾರಣಹೋಮ ಸೃಷ್ಟಿಸಿದ ನಂತರ ಪ್ರತೀಕಾರವಾಗಿ ಇಸ್ರೇಲ್​ ಹಮಾಸ್​ ಉಗ್ರರರ ವಿರುದ್ಧ ಸಮರ ಸಾರಿದೆ. ಯುದ್ಧದ ಪರಿಣಾಮ ಲಕ್ಷಾಂತರ ನಾಗರಿಕರು ನಿರಾಶ್ರಿತರಾಗಿದ್ದಾರೆ. ಅಮೆರಿಕದ ಮನವಿ ಮೇರೆಗೆ ಅಲ್ಲಿನ ಜನರಿಗೆ ನೆರವು ಒದಗಿಸಲು ಇಸ್ರೇಲ್​ ಸಹ ಈಗ ಒಪ್ಪಿಕೊಂಡಿದೆ.
ಭಾರತ ಕಳುಹಿಸಿಕೊಟ್ಟಿರುವ ಅಗತ್ಯ ವಸ್ತುಗಳಲ್ಲಿ ಜೀವ ಉಳಿಸುವ ಔಷಧಿಗಳು, ಶಸ್ತ್ರಚಿಕಿತ್ಸಾ ವಸ್ತುಗಳು, ಟೆಂಟ್ಗಳು, ಮಲಗುವ ಚೀಲಗಳು, ಟಾರ್ಪೌಲಿನ್ಗಳು ಮತ್ತು ಇತರ ಅಗತ್ಯ ವಸ್ತುಗಳು ಇವೆ. ಅಲ್ಲದೆ, ನೀರು ಶುದ್ಧೀಕರಣ ಮಾತ್ರೆಗಳನ್ನು ಕಳುಹಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್​ ಬಾಗ್ಚಿ ತಿಳಿಸಿದ್ದಾರೆ.

ಇಸ್ರೇಲ್‌ ಗಾಜಾಕ್ಕೆ ನೀರು, ವಿದ್ಯುತ್​, ಇಂಧನ ಮತ್ತು ಆಹಾರ ಪೂರೈಕೆ ಸ್ಥಗಿತಗೊಳಿಸಿದ್ದು, ಇದರಿಂದ ಆಹಾರ ಹಾಗೂ ಮತ್ತಿತರ ಮೂಲಭೂತ ಅಗತ್ಯಗಳ ಕೊರತೆಯನ್ನು ಸೃಷ್ಟಿಯಾಗುತ್ತಿದೆ. ಇಸ್ರೇಲ್​​ ನಿಯಂತ್ರಣಕ್ಕೆ ಒಳಗಾಗದ ರಫಾ ಗಡಿಯು ಮಾತ್ರ ಗಾಜಾಕ್ಕೆ ಇರುವ ಏಕೈಕ ಮಾರ್ಗವಾಗಿದೆ. ತಮ್ಮ ಮಿತ್ರ ದೇಶವಾಗಿರುವ ಅಮೆರಿಕದ​ ಮನವಿಯ ಮೇರೆಗೆ ಈಜಿಪ್ಟ್​ನಿಂದ ಗಾಜಾಗೆ ನೆರವು ಸಾಗಿಸಲು ಇಸ್ರೇಲ್​ ಈಗ ಅನುಮತಿಸಿದೆ.
ವಿಶ್ವಸಂಸ್ಥೆಯ ವಿವಿಧ ಏಜೆನ್ಸಿಗಳಿಂದ ಬಂದ ನೆರವನ್ನು ಗಾಜಾಕ್ಕೆ ತಲುಪಿಸುವ ಜವಾಬ್ದಾರಿಯನ್ನು ಈಜಿಪ್ಟಿನ ರೆಡ್ ಕ್ರೆಸೆಂಟ್ ಕಚೇರಿಯು ಹೊತ್ತಿದೆ.
ಭಾರತ ಕಳುಹಿಸಿಕೊಟ್ಟಿರುವ ಅಗತ್ಯ ವಸ್ತುಗಳು ರಫಾ ಗಡಿಯ ಮೂಲಕ ಗಾಜಾಕ್ಕೆ ತಲುಪಲಿದೆ. ನಿನ್ನೆ ಇಪ್ಪತ್ತು ಟ್ರಕ್‌ ಗಳು ಈಜಿಪ್ಟಿನ ಟರ್ಮಿನಲ್ ಅನ್ನು ಪ್ರವೇಶಿಸಿದ್ದವು. ಪ್ಯಾಲೆಸ್ತೀನ್​ ಕಡೆಯ 36 ಖಾಲಿ ಟ್ರೇಲರ್ಗಳು ಟರ್ಮಿನಲ್ಗೆ ಪ್ರವೇಶಿಸಿ ಈಜಿಪ್ಟಿನ ಕಡೆಗೆ ಹೋಗಿ, ನೆರವನ್ನು ಲೋಡ್ ಮಾಡಿಕೊಂಡು ರಫಾ ಗಡಿಯ ಮೂಲಕ ಗಾಜಾಗೆ ತೆರಳಿವೆ.

ಪ್ರಮುಖ ಸುದ್ದಿ :-   ಡಿಸೆಂಬರ್ 13 ಅಥವಾ ಅದಕ್ಕಿಂತ ಮೊದಲು ಸಂಸತ್ತಿನ ಮೇಲೆ ದಾಳಿ ಮಾಡುವುದಾಗಿ ವೀಡಿಯೊ ಮೂಲಕ ಬೆದರಿಕೆ ಹಾಕಿದ ಖಲಿಸ್ತಾನಿ ಭಯೋತ್ಪಾದಕ ಪನ್ನುನ್: ವರದಿ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement