ಬಾಂಬ್ ತಯಾರಿಸಲು ಕೇವಲ ₹ 3,000 ರೂ. ಖರ್ಚು ಮಾಡಿದ್ದ ಕೇರಳ ಸರಣಿ ಸ್ಫೋಟದ ಆರೋಪಿ : ವರದಿ

ಕೊಚ್ಚಿ : ಭಾನುವಾರ ನಡೆದ ಕೇರಳದ ಪ್ರಾರ್ಥನಾ ಸಭೆಯಲ್ಲಿ ಸರಣಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ ತಾನು ಅಂತರ್ಜಾಲದಿಂದ ಬಾಂಬ್ ತಯಾರಿಕೆ ಕಲಿತಿರುವುದಾಗಿ ಹೇಳಿಕೊಂಡಿದ್ದಾನೆ ಎಂದು ವರದಿ ತಿಳಿಸಿದೆ.
ಎಲೆಕ್ಟ್ರಿಕ್ ಸರ್ಕ್ಯೂಟ್‌ನಲ್ಲಿ ಪರಿಣಿತ ಎಂದು ಹೇಳಲಾದ 48 ವರ್ಷದ ಡೊಮಿನಿಕ್ ಮಾರ್ಟಿನ್ ಬಾಂಬ್ ತಯಾರಿಸಲು ಸುಮಾರು ₹ 3,000 ಖರ್ಚು ಮಾಡಿದ್ದಾಗಿ ಹೇಳಿದ್ದಾನೆ.ಮಾರ್ಟಿನ್ ಕುಟುಂಬವು ಕೊಚ್ಚಿ ಬಳಿ ಐದು ವರ್ಷಗಳಿಂದ ಬಾಡಿಗೆ ವಸತಿಗೃಹದಲ್ಲಿ ವಾಸಿಸುತ್ತಿತ್ತು. ಮಾರ್ಟಿನ್ ಗಲ್ಫ್‌ನಲ್ಲಿ ಫೋರ್‌ಮ್ಯಾನ್ ಆಗಿ ವರ್ಷಗಳ ಕಾಲ ಕೆಲಸ ಮಾಡಿದ್ದಾನೆ ಹಾಗೂ ಅಲ್ಲಿ ಆತ ಎಲೆಕ್ಟ್ರಾನಿಕ್ ಸಾಧನವನ್ನು ಜೋಡಿಸಲು ಕಲಿತಿದ್ದಾನೆ. ಆತ ಎರಡು ತಿಂಗಳ ಹಿಂದೆ ಭಾರತಕ್ಕೆ ಮರಳಿದ ನಂತರ ಸ್ಫೋಟಗಳನ್ನು ನಡೆಸಿದ್ದ ಎಂದು ಮೂಲಗಳು ತಿಳಿಸಿವೆ.
ಪ್ರಾಥಮಿಕ ತನಿಖೆಯ ಪ್ರಕಾರ ಐಇಡಿಗಳನ್ನು ಪಟಾಕಿಗಳಲ್ಲಿ ಬಳಸುವ ಕಡಿಮೆ ದರ್ಜೆಯ ಸ್ಫೋಟಕಗಳಿಂದ ತಯಾರಿಸಲಾಗಿದೆ. ಆತ ತನ್ನ ಮನೆಯಲ್ಲಿ ಐಇಡಿಗಳನ್ನು ಜೋಡಿಸಿರುವುದಾಗಿ ಹೇಳಿದ್ದಾನೆ ಎಂದು ಎಂದು ಮೂಲಗಳು ತಿಳಿಸಿವೆ

ಯೆಹೋವನ ವಿಟ್ನೆಸ್‌ ಸಮಾವೇಶದಲ್ಲಿ ಭಾಗವಹಿಸಿದವರಿಗೆ ಹಾನಿ ಉದ್ದೇಶದಿಂದ ಮಾರ್ಟಿನ್ ಸ್ಫೋಟಕಗಳನ್ನು ಹಾಲ್‌ನೊಳಗೆ ಇರಿಸಿದ್ದ.ಶರಣಾಗುವ ಮೊದಲು, ಮಾರ್ಟಿನ್ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ವೀಡಿಯೊ ಸಂದೇಶ ಸಹ ಪೋಸ್ಟ್ ಮಾಡಿದ್ದಾನೆ. ವೀಡಿಯೊದಲ್ಲಿ, ಸಂಘಟನೆಯ ಬೋಧನೆಗಳು “ದೇಶದ್ರೋಹಿ” ಆಗಿರುವುದರಿಂದ ತಾನು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಮಾರ್ಟಿನ್‌ ಹೇಳಿಕೊಂಡಿದ್ದಾನೆ.
ಸಮುದಾಯವು ಜನರಿಗೆ, ಮಕ್ಕಳಿಗೆ ಸಹ ತಪ್ಪು ಮೌಲ್ಯಗಳನ್ನು ಕಲಿಸುತ್ತಿದೆ ಎಂದು ಅವರು ವೀಡಿಯೊದಲ್ಲಿ ಹೇಳಿದ್ದಾನೆ. ಆತ ಅದನ್ನು ನಿಲ್ಲಿಸುವಂತೆ ಕೇಳಿಕೊಂಡಿದ್ದಾನೆ, ಆದರೆ ಯಾರೂ ತನ್ನ ಮಾತನ್ನು ಕೇಳಲಿಲ್ಲ ಎಂದು ಹೇಳಿದ್ದಾನೆ. ಈ ಸಮುದಾಯವು ರಾಷ್ಟ್ರಕ್ಕೆ ಕೆಟ್ಟದ್ದು ಎಂದು ತಾನು ಅರ್ಥಮಾಡಿಕೊಂಡಾಗ, ತಾನು ಸರಣಿ ಸ್ಫೋಟಗಳನ್ನು ಮಾಡಲು ನಿರ್ಧರಿಸಿದೆ ಎಂದು ಆತ ಹೇಳಿಕೊಂಡಿದ್ದಾನೆ.

ಪ್ರಮುಖ ಸುದ್ದಿ :-   ಮೊಬೈಲ್ ನಲ್ಲಿ ಹುಡುಗರ ಜೊತೆ ಹರಟೆ ಬೇಡ ಅಂದಿದ್ದಕ್ಕೆ ಅಣ್ಣನನ್ನೇ ಕೊಡಲಿಯಿಂದ ಹೊಡೆದು ಕೊಂದ 14 ವರ್ಷದ ಬಾಲಕಿ...!

ಭಾನುವಾರ ಕೊಚ್ಚಿ ಬಳಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸರಣಿ ಸ್ಫೋಟದಲ್ಲಿ ಇಬ್ಬರು ಮಹಿಳೆಯರು ಮತ್ತು 12 ವರ್ಷದ ಬಾಲಕಿ ಮೃತಪಟ್ಟಿದ್ದು, 50 ಜನರು ಗಾಯಗೊಂಡಿದ್ದಾರೆ. ಯೆಹೋವನ ವಿಟ್ನೆಸ್‌ ಅಧಿವೇಶನದಲ್ಲಿ ಸುಮಾರು 2,000 ಜನರು ಭಾಗವಹಿಸಿದ್ದರು.
ಪ್ರಾರ್ಥನಾ ಸಭೆ ಆರಂಭವಾದ ಕೆಲವೇ ನಿಮಿಷಗಳಲ್ಲಿ ಕನಿಷ್ಠ ಮೂರು ಸ್ಫೋಟಗಳು ಸಂಭವಿಸಿವೆ ಎಂದು ವರದಿಯಾಗಿದೆ. ಪ್ರಾರ್ಥನೆಯ ಮಧ್ಯೆ ಮೊದಲ ಸ್ಫೋಟ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಸುದ್ದಿಗಾರರಿಗೆ ತಿಳಿಸಿದ್ದಾರೆ. ಮೊದಲ ಸ್ಫೋಟದ ನಂತರ ತಕ್ಷಣವೇ ಕಾರ್ಯರೂಪಕ್ಕೆ ಬಂದ ಗುಂಪು ಸ್ಥಳಾಂತರಿಸುವ ಯೋಜನೆಯನ್ನು ಹೊಂದಿತ್ತು, ಆದಾಗ್ಯೂ, ಸಾಕಷ್ಟು ಹೊಗೆ ಇತ್ತು, ಇದು ಕಾಲ್ತುಳಿತಕ್ಕೆ ಕಾರಣವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಪರಿಣತಿ ಹೊಂದಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇದೀಗ ಸರಣಿ ಸ್ಫೋಟಗಳ ತನಿಖೆ ನಡೆಸಲಿದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement