ಬಂಡೀಪುರ ಅರಣ್ಯ ಪ್ರದೇಶದಲ್ಲಿ ಗುಂಡಿನ ಚಕಮಕಿ: ಓರ್ವ ಬೇಟೆಗಾರ ಸಾವು

ಚಾಮರಾಜನಗರ : ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದು ಓರ್ವ ಬೇಟೆಗಾರ ಸಾವಿಗೀಡಾದ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ಚೆಕ್ ಪೋಸ್ಟ್ ಸಮೀಪ ನಡೆದಿದೆ ಎಂದು ವರದಿಯಾಗಿದೆ.
ವರದಿ  ಪ್ರಕಾರ,  ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ ಯುವಕ ಗುಂಡೇಟಿನಿಂದ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಮದ್ದೂರು ಅರಣ್ಯ ವಲಯದಲ್ಲಿ 8-10 ಮಂದಿಯ ಗುಂಪು ಕಾಡುಹಂದಿಗಳನ್ನು ಬೇಟೆಯಾಡಲು ಬಂದಿತ್ತು ಎನ್ನಲಾಗಿದೆ. ಈ ವೇಳೆ ಗಸ್ತಿನ ಸಿಬ್ಬಂದಿ ಹಾಗೂ 8-10 ಮಂದಿ ಇದ್ದ ಬೇಟೆಗಾರರ ಗುಂಪಿನ ನಡುವೆ ಗುಂಡಿನ ಚಕಮಕಿ ನಡೆದಿದೆ. ನಾಡಬಂದೂಕುಗಳಿಂದ ಕಳ್ಳಬೇಟೆಗೆ ಬಂದು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಲು ಮುಂದಾದಾಗ ಅರಣ್ಯ ಸಿಬ್ಬಂದಿಯೂ ಪ್ರತಿಯಾಗಿ ಗುಂಡುಹಾರಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಘಟನೆ ನಡೆದಿದೆ. ಉಳಿದ ಬೇಟೆಗಾರರು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement