ಟಿಕೆಟ್‌ ವಂಚನೆ ಹಗರಣ: ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ 800 ಪುಟಗಳ ಆರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು : ಉಡುಪಿಯ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಬಿಜೆಪಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಆರೋಪಿಗಳಾದ ಚೈತ್ರಾ ಮತ್ತು ಇತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಕೇಂದ್ರೀಯ ಅಪರಾಧ ದಳ (ಸಿಸಿಬಿ) 800 ಪುಟಗಳ ಆರೋಪ ಪಟ್ಟಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಸಲ್ಲಿಸಿದೆ.
ಬೆಂಗಳೂರಿನ 3ನೇ ಮೂರನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ತನಿಖಾಧಿಕಾರಿಯು ಬುಧವಾರ ಆರೋಪ ಪಟ್ಟಿ ಸಲ್ಲಿಸಿದ್ದಾರೆ.
ಸಿಸಿಬಿಯು 68 ಸಾಕ್ಷ್ಯಗಳನ್ನ ಕಲೆ ಹಾಕಿದೆ. 75 ಸಾಕ್ಷಿದಾರರ ಹೇಳಿಕೆಗಳನ್ನು ದಾಖಲಿಸಿದೆ ಎನ್ನಲಾಗಿದೆ.
ಆರೋಪಿಗಳಾದ ಚೈತ್ರಾ, ಅಭಿನವ ಹಾಲಶ್ರೀ ಹಾಗೂ ಇತರರ ವಿರುದ್ಧ ಬೆಂಗಳೂರಿನ ಬಂಡೇಪಾಳ್ಯ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳಾದ 170, 406, 419, 420, 506 ಮತ್ತು 120ಬಿ ಅಡಿ ಪ್ರಕರಣ ದಾಖಲಾಗಿದೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement