ನ.15ಕ್ಕೆ ಬಿಜೆಪಿಯ ನೂತನ ಅಧ್ಯಕ್ಷ ವಿಜಯೇಂದ್ರ ಪದಗ್ರಹಣ

ಬೆಂಗಳೂರು: ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷ ವಿಜಯೇಂದ್ರ (BY Vijayendra) ಪದಗ್ರಹಣಕ್ಕೆ ಮುಹೂರ್ತ ನಿಗದಿಯಾಗಿದೆ. ನವೆಂಬರ್ 15ರ ಬೆಳಗ್ಗೆ 10 ಗಂಟೆಗೆ ನಗರದ ಪಕ್ಷದ ಕಚೇರಿಯಲ್ಲಿ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.
ನಂತರ ಬುಧವಾರ ಮಧ್ಯಾಹ್ನ 1 ಗಂಟೆಗೆ ಅರಮನೆ ಮೈದಾನದಲ್ಲಿ ಪದಗ್ರಹಣ ಸಮಾವೇಶ ನಡೆಯಲಿದೆ. ಇದಾದ ಮರುದಿನವೇ ನವೆಂಬರ್ 16ರಂದು ವಿಜಯೇಂದ್ರ ಪಕ್ಷದ ಶಾಸಕಾಂಗ ಸಭೆ ನಡೆಸಲು ಚಿಂತನೆ ನಡೆಸಿದ್ದಾರೆ. ಈ ವಿಚಾರವನ್ನು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ (JP Nadda) ಜೊತೆ ಚರ್ಚಿಸಿ ಅಂತಿಮಗೊಳಿಸಲಿದ್ದಾರೆ.
ಇದಾದ ಮರುದಿನವೇ ನವೆಂಬರ್ 16ರಂದು ವಿಜಯೇಂದ್ರ ಪಕ್ಷದ ಶಾಸಕಾಂಗ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನೇಮಕವಾಗುತ್ತಿದ್ದಂತೆಯೇ ಬಿ.ವೈ ವಿಜಯೇಂದ್ರ ಶನಿವಾರ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ನಿರ್ಮಲಾನಂದ ಸ್ವಾಮೀಜಿಗಳ ಆಶೀರ್ವಾದ ಪಡೆದುಕೊಂಡಿದ್ದಾರೆ. ಅವರು ಚಾಮರಾಜಪೇಟೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಚೇರಿ ಕೇಶವಕೃಪಾಕಕ್ಕೆ ಭೇಟಿ ನೀಡಿದ್ದರು. ಭಾನುವಾರ ತುಮಕೂರಿನ ಸಿದ್ದಂಗಂಗಾ ಮಠಕ್ಕೆ ವಿಜಯೇಂದ್ರ ಭೇಟಿ ನೀಡಲಿದ್ದಾರೆ. ಬಳಿಕ ಮನೆ ದೇವರು ಯಡಿಯೂರು ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ‌ ನೀಡಿ ಪೂಜೆ ಸಲ್ಲಿಸಲಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಇಂದಿನಿಂದ (ಮೇ19) 5 ದಿನ ಧಾರಾಕಾರ ಮಳೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement