‘ಫೇಕ್ ಕಾಮ್ರೆಡ್ಸ್ ಹಮಾಸ್ ರ್‍ಯಾಲಿʼ ಸ್ಫೋಟಿಸ್ತೇವೆ: ಕೋಯಿಕ್ಕೋಡ್ ಜಿಲ್ಲಾಧಿಕಾರಿಗೆ ಮಾವೋವಾದಿಗಳ ಬೆದರಿಕೆ ಪತ್ರ

ಕೋಯಿಕ್ಕೋಡ್: ಮಾವೋವಾದಿಗಳ ವಿರುದ್ಧದ ಸರ್ಕಾರ ಮತ್ತು ಪೊಲೀಸರು ಕಾರ್ಯಾಚರಣೆಯನ್ನು ನಿಲ್ಲಿಸದಿದ್ದರೆ ‘ಫೇಕ್ ಕಾಮ್ರೆಡ್ಸ್ ಹಮಾಸ್ ರ್ಯಾಲಿ’ಯನ್ನು ಸ್ಫೋಟಿಸುವುದಾಗಿ ಭಾರತೀಯ ಕಮ್ಯುನಿಸ್ಟ್ ಪಾರ್ಟಿ (ಮಾವೋವಾದಿ) ಕೋಯಿಕ್ಕೋಡ್ ಜಿಲ್ಲಾಧಿಕಾರಿಗೆ ಪತ್ರವೊಂದನ್ನು ಕಳುಹಿಸಿದೆ.
ಕೋಯಿಕ್ಕೋಡ್ ಜಿಲ್ಲೆಯ ಅಗತ್ಯತೆಗಳನ್ನು ಪೂರೈಸುವುದನ್ನು ಬಿಟ್ಟು ಸರ್ಕಾರವು ವಿದೇಶಿ ಭಯೋತ್ಪಾದಕರಿಗಾಗಿ ರ್‍ಯಾಲಿಯನ್ನು ಆಯೋಜಿಸುತ್ತಿದೆ ಎಂದು ಪತ್ರದಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿದೆ.
ಬುಧವಾರ ಜಿಲ್ಲಾಧಿಕಾರಿ ಕಚೇರಿಗೆ ಪತ್ರ ತಲು‍ಪಿದ್ದು, ಅದನ್ನು ಪೊಲೀಸರಿಗೆ ರವಾನಿಸಲಾಗಿದೆ. ಮಾವೋವಾದಿಗಳನ್ನು ಅನ್ಯಾಯವಾಗಿ ಗುರಿಯಾಗಿಸಿಕೊಳ್ಳಲಾಗಿದ್ದು, ಸುಳ್ಳು ಮೊಕದ್ದಮೆ ದಾಖಲಿಸಲಾಗುತ್ತಿದೆ ಎಂದು ಪತ್ರದಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಅನ್ಯಾಯವಾಗಿ ನಮ್ಮನ್ನು ಗುರಿಯಾಗಿಸಿಕೊಳ್ಳುವುದು ಮತ್ತು ನಮ್ಮ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುವುದನ್ನು ಸರ್ಕಾರ ನಿಲ್ಲಿಸದಿದ್ದರೆ ಕೊಚ್ಚಿಯ ಪ್ರಾರ್ಥನಾ ಮಂದಿರದಲ್ಲಿ ಆಗಿದ್ದೇ ಹಮಾಸ್ ರ್‍ಯಾಲಿ ಸಂದರ್ಭ ಆಗುತ್ತದೆ ಎಂದು ಮಾವೋವಾದಿಗಳು ಎಚ್ಚರಿಕೆ ನೀಡಿದ್ದಾರೆ.
ಪತ್ರದ ಬಗ್ಗೆ ಮಾಹಿತಿ ನೀಡಿದ ನಡಕ್ಕಾವ್ ಪೊಲೀಸ್ ಠಾಣೆ ಠಾಣಾಧಿಕಾರಿ, ಮಾವೋವಾದಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದ ಕಣ್ಣೂರು ಮತ್ತು ವಯನಾಡು ಜಿಲ್ಲೆಗಳಲ್ಲಿ ಮಾವೋವಾದಿಗಳು ಮತ್ತು ಕೇರಳ ಪೊಲೀಸರ ವಿಶೇಷ ತಂಡಗಳ ನಡುವೆ ಇತ್ತೀಚೆಗೆ ನಡೆದ ಸಶಸ್ತ್ರ ಘರ್ಷಣೆಯ ಹಿನ್ನೆಲೆಯಲ್ಲಿ ಈ ಪತ್ರ ಬಂದಿದೆ.

ಪ್ರಮುಖ ಸುದ್ದಿ :-   ರೋಹಿತ್ ವೇಮುಲಾ ದಲಿತನಲ್ಲ : ಪೊಲೀಸರ ಅಂತಿಮ ವರದಿ ; ಎಲ್ಲ ಆರೋಪಿಗಳಿಗೆ ಕ್ಲೀನ್ ಚಿಟ್

ಕೇರಳ ಪೊಲೀಸರ ವಿಶೇಷ ಥಂಡರ್ ಬೋಲ್ಟ್ ಸ್ಕ್ವಾಡ್ ಕಣ್ಣೂರು ಜಿಲ್ಲೆಯಲ್ಲಿ ಈ ವಾರ ಎರಡು ಬಾರಿ ಮಾವೋವಾದಿಗಳೊಂದಿಗೆ ಗುಂಡಿನ ಕಾಳಗ ನಡೆಸಿತ್ತು. ಅದಕ್ಕೂ ಮುನ್ನ ಕಳೆದ ವಾರ ವಯನಾಡಿನ ಅರಣ್ಯ ಪ್ರದೇಶದಲ್ಲಿ ಥಂಡರ್ ಬೋಲ್ಟ್ ಪಡೆ ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು.
ವಯನಾಡಿನ ತಲಪ್ಪುಳ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಿಯಾ ಪ್ರದೇಶದಲ್ಲಿ ನಡೆದ ಗುಂಡಿನ ಕಾಳಗದ ನಂತರ ಇಬ್ಬರು ಮಾವೋವಾದಿಗಳು – ಒಬ್ಬ ಪುರುಷ ಮತ್ತು ಮಹಿಳೆಯನ್ನು ಬಂಧಿಸಲಾಗಿದೆ. ಬಂಧಿತರನ್ನು ಚಂದ್ರು ಮತ್ತು ಉನ್ನಿಮಯ ಎಂದು ಗುರುತಿಸಲಾಗಿದೆ.

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement