ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ ಗೋಯಲ್ ನೇಮಕ

ಬೆಂಗಳೂರು : ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ.
ನವೆಂಬರ್ 30ರಂದು ಮುಖ್ಯ ಕಾರ್ಯದರ್ಶಿಯಾಗಿರುವ ವಂದಿತಾ ಶರ್ಮಾ ಅವರು ನಿವೃತ್ತಿಯಾಗಲಿರುವ ಹಿನ್ನೆಲೆಯಲ್ಲಿ ರಜನೀಶ ಗೋಯಲ್ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯಾಗಿ ಸರ್ಕಾರ ನೇಮಕ ಮಾಡಿ ಮಂಗಳವಾರ (ನ.21ರಂದು) ಆದೇಶ ಹೊರಡಿಸಿದೆ.
ಪ್ರಸ್ತುತ ರಜನೀಶ್ ಗೋಯಲ್ ಅವರು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ. ಅವರು 1986-ನೇ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದಾರೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ. ರಜನೀಶ್ ಗೋಯೆಲ್ವಂದಿತಾ ಶರ್ಮಾ ಅವರು ನವೆಂಬರ್‌ನಲ್ಲಿ ನಿವೃತ್ತರಾಗಲಿರುವ ಕಾರಣ, ಗೋಯೆಲ್ ಮುಂದಿನ ಮುಖ್ಯ ಕಾರ್ಯದರ್ಶಿಯಾಗಲಿದ್ದಾರೆ.
ಇತರ ಹಿರಿಯ ಐಎಎಸ್ ಅಧಿಕಾರಿಗಳಾದ ಅಜಯ್ ಸೇಠ್, ವಿ ಮಂಜುಳಾ ಮತ್ತು ರಾಕೇಶ್ ಸಿಂಗ್ ಅವರ ಹೆಸರುಗಳೂ ಕೂಡ ಮುಖ್ಯ ಕಾರ್ಯದರ್ಶಿ ಹುದ್ದೆಗಾಗಿ ಮುನ್ನೆಲೆಗೆ ಬಂದಿದ್ದವು. ಆದರೆ ಸರ್ಕಾರ ಗೋಯಲ್ ಅವರನ್ನು ನೇಮಕಗೊಳಿಸಿ, ಆದೇಶ ಹೊರಡಿಸಿದೆ. ಮುಂದಿನ ವರ್ಷ ಜುಲೈನಲ್ಲಿ ಗೋಯೆಲ್ ನಿವೃತ್ತಿಯಾಗಲಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement