ಜನ್ಮ ದಿನಾಚರಣೆಗೆ ದುಬೈಗೆ ಕರೆದೊಯ್ಯಲು ನಿರಾಕರಿಸಿದ ಪತಿ : ಮುಖಕ್ಕೆ ಪತ್ನಿ ಗುದ್ದಿದ ರಭಸಕ್ಕೆ ಗಂಡನ ಪ್ರಾಣವೇ ಹಾರಿಹೋಯ್ತು…!

ಪುಣೆ: ತನ್ನ ಜನ್ಮದಿನದ ಆಚರಣೆಗಾಗಿ ದುಬೈಗೆ ಕರೆದುಕೊಂಡು ಹೋಗಲು ನಿರಾಕರಿಸಿದ ಕಾರಣಕ್ಕೆ ಪತ್ನಿಯು ತನ್ನ ಗಂಡನ ಮೂಗಿಗೆ ಬಲವಾಗಿ ಗುದ್ದಿದ ಪರಿಣಾಮ ಗಂಡ ಪ್ರಾಣ ಕಳೆದುಕೊಂಡ ಘಟನೆ ಪುಣೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪುಣೆಯ ವನವಡಿ ಪ್ರದೇಶದಲ್ಲಿ ದಂಪತಿ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಈ ಘಟನೆ ನಡೆದಿದೆ.
ಹತ್ಯೆಗೀಡಾದ ವ್ಯಕ್ತಿಯನ್ನು ನಿಖಿಲ್ ಖನ್ನಾ (36) ಎಂದು ಗುರುತಿಸಲಾಗಿದ್ದು, ಅವರು ನಿರ್ಮಾಣ ಉದ್ಯಮದಲ್ಲಿ ಉದ್ಯಮಿಯಾಗಿದ್ದರು. ಆರು ವರ್ಷಗಳ ಹಿಂದೆ ಪತ್ನಿ ರೇಣುಕಾ (38) ಜತೆ ಪ್ರೇಮ ವಿವಾಹವಾಗಿದ್ದರು.
ದಂಪತಿ ಜಗಳವಾಡಿದರು…
ವನವಡಿ ಪೊಲೀಸ್ ಠಾಣೆಯಲ್ಲಿ ಪೋಸ್ಟ್ ಮಾಡಲಾದ ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ, ನಿಖಿಲ್ ಜನ್ಮದಿನ ಆಚರಿಸಲು ದುಬೈಗೆ ರೇಣುಕಾಳನ್ನು ಕರೆದುಕೊಂಡು ಹೋಗಲಿಲ್ಲ ಮತ್ತು ಅವಳ ಜನ್ಮದಿನ ಮತ್ತು ಮದುವೆ ವಾರ್ಷಿಕೋತ್ಸವದಂದು ದುಬಾರಿ ಉಡುಗೊರೆಗಳನ್ನು ನೀಡದ ಕಾರಣ ದಂಪತಿಗಳು ಜಗಳವಾಡಿದ್ದಾರೆ.

“ಶುಕ್ರವಾರ ಮಧ್ಯಾಹ್ನ ಘಟನೆ ನಡೆದಿದ್ದು, ಪ್ರಾಥಮಿಕ ತನಿಖೆಯ ಪ್ರಕಾರ, ನಿಖಿಲ್ ಅವರು ರೇಣುಕಾ ಅವರ ಜನ್ಮದಿನ ಆಚರಿಸಲು ದುಬೈಗೆ ಕರೆದುಕೊಂಡು ಹೋಗಲಿಲ್ಲ ಮತ್ತು ಅವರ ಜನ್ಮದಿನ ಮತ್ತು ವಾರ್ಷಿಕೋತ್ಸವದಂದು ದುಬಾರಿ ಉಡುಗೊರೆಗಳನ್ನು ನೀಡದ ಕಾರಣ ದಂಪತಿಗಳು ಜಗಳವಾಡಿದ್ದಾರೆ ಎಂದು ತಿಳಿದುಬಂದಿದೆ. ಕೆಲವು ಸಂಬಂಧಿಕರ ಜನ್ಮದಿನ ಆಚರಿಸಲು ದೆಹಲಿಗೆ ಹೋಗಬೇಕೆಂಬ ತನ್ನ ಆಸೆಗೆ ಪ್ರತಿಕ್ರಿಯೆ ನೀಡದಿದ್ದಕ್ಕಾಗಿ ಪತ್ನಿ ನಿಖಿಲ್ ವಿರುದ್ಧ ಅಸಮಾಧಾನಗೊಂಡಿದ್ದರು ಎಂದು ಪೊಲೀಸರು ಹೇಳಿದ್ದಾರೆ.
“ಜಗಳದ ವೇಳೆ ರೇಣುಕಾ ನಿಖಿಲ್‌ನ ಮುಖಕ್ಕೆ ಗುದ್ದಿದ್ದಾಳೆ. ಗುದ್ದಿದ ರಭಸಕ್ಕೆ ನಿಖಿಲ್‌ ಅವರ ಮೂಗು ಮತ್ತು ಕೆಲವು ಹಲ್ಲುಗಳು ಮುರಿದಿವೆ. ತೀವ್ರ ರಕ್ತಸ್ರಾವದಿಂದ ನಿಖಿಲ್ ಪ್ರಜ್ಞೆ ಕಳೆದುಕೊಂಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ರೇಣುಕಾ ವಿರುದ್ಧ ಐಪಿಸಿ ಸೆಕ್ಷನ್ 302 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಮತ್ತು ಹೆಚ್ಚಿನ ತನಿಖೆಗಾಗಿ ಅವರನ್ನು ಬಂಧಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ...| ಶಾಲೆಯಲ್ಲೇ ಹೊಡೆದಾಡಿಕೊಂಡ ಪ್ರಾಂಶುಪಾಲೆ-ಶಿಕ್ಷಕಿ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement