ಅಮಾಯಕ ಸೈನಿಕರ ಬಲಿ ಪಡೆದ ಕೀರ್ತಿ ಮೋದಿಗೆ ಸಲ್ಲುತ್ತದೆ : ಬಾಲಕೃಷ್ಣ ವಾಗ್ದಾಳಿ

ರಾಮನಗರ: ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಮಾಗಡಿ ಕಾಂಗ್ರೆಸ್ ಶಾಸಕ ಎಚ್.ಸಿ ಬಾಲಕೃಷ್ಣ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಮಾಗಡಿ ತಾಲೂಕಿನ ತೂಬಿನಕೆರೆ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಸೈನಿಕರನ್ನು ಬಲಿ ಪಡೆದ ಕೀರ್ತಿ ಮೋದಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ವಿವಾದಾತ್ಮಕ ಹೇಳೀಕೆ ನೀಡಿದ್ದಾರೆ. ಬಿಜೆಪಿಯವರು ಬ್ರಿಟಿಷರಿದ್ದಂತೆ. ಜನರ ಮಧ್ಯೆ ಎತ್ತಿಕಟ್ಟುವ ಕೆಲಸ ಮಾಡುತ್ತಾರೆ ಎಂದು ಅವರು ಬಿಜೆಪಿಯನ್ನು ಬ್ರಿಟೀಷರಿಗೆ ಹೋಲಿಕೆ ಮಾಡಿದರು.
ದೇಶದ ಅಮಾಯಕ ಸೈನಿಕರನ್ನು ಬಲಿ ಕೊಟ್ಟಂತಹ ಕೀರ್ತಿ ಮೋದಿ ಸರ್ಕಾರಕ್ಕೆ ಸಲ್ಲುತ್ತದೆ. ಬಲಿದಾನವಾಗಿದ್ದು ಸೈನಿಕರು, ಅಧಿಕಾರ ಬಂದಿದ್ದು ಮೋದಿಗೆ. ಈ ಬಗ್ಗೆ ಜನ ಅರ್ಥಮಾಡಿಕೊಳ್ಳಬೇಕು ಎಂದರು.

ಮಾಯಾವತಿ ಮುಂದಿನ ಪ್ರಧಾನಿ ಆಕಾಂಕ್ಷಿ ಎಂದು ಬಹಿರಂಗಪಡಿಸತ್ತಿದ್ದಂತೆ ಹೇಳುತ್ತಿದ್ದಂತೆ ಉತ್ತರ ಪ್ರದೇಶದಲ್ಲಿ ಬಿಜೆಪಿಯವರು ಮಾಯಾವತಿ ಅವರ ಹೆಸರಿಲ್ಲದಂತೆ ಮಾಡಿದರು. ಅವರಿಗೆ ಕರ್ನಾಟಕದಲ್ಲಿ ಕುಮಾರಣ್ಣ ಯಾವ ಲೆಕ್ಕ. ನಮ್ಮನ್ನು ನೋಡಿದ ತಕ್ಷಣ ಕುಮಾರಣ್ಣ ಬಿಜೆಪಿಯವರನ್ನು ತಬ್ಬಿಕೊಳ್ಳುತ್ತಾರೆ. ಹಲವು ವರ್ಷಗಳಿಂದ ಕುಮಾರಸ್ವಾಮಿ ಅವರು ನಾವು ಜಾತ್ಯಾತೀತ ಎಂದು ಹೇಳುತ್ತಿದ್ದ ದೇವೇಗೌಡರನ್ನು ಇಳಿವಯಸ್ಸಿನಲ್ಲಿ ಕೋಮುವಾದಿ ಮಾಡಿಬಿಟ್ಟರು ಎಂದು ಟೀಕಿಸಿದರು.
ಜೆಡಿಎಸ್ ಪಕ್ಷದವರು ಎಚ್ಚೆತ್ತುಕೊಳ್ಳದಿದ್ದರೆ ಅವರ ಅಸ್ತಿತ್ವವನ್ನು ಬಿಜೆಪಿಯವರು ಸಂಪೂರ್ಣ ಇಲ್ಲವಾಗಿಸುತ್ತಾರೆ. ಉತ್ತರ ಪ್ರದೇಶದ ಮಾಯಾವತಿಗೆ ಮಾಡಿದ ರೀತಿಯಲ್ಲೇ ಬಿಜೆಪಿಯವರು ಕರ್ನಾಟಕದಲ್ಲಿ ಜೆಡಿಎಸ್ ಪಕ್ಷವನ್ನು ಮಾಡದಿದ್ದರೆ ನನ್ನ ಹೆಸರನ್ನು ಬದಲಾವಣೆ ಮಾಡಿಕೊಳ್ಳುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement