ಬೆಂಗಳೂರು : ನಿಗಮ ಮಂಡಳಿಗೆ ಅಧ್ಯಕ್ಷರ ಹುದ್ದೆಗೆ ಮೊದಲ ಹಂತದಲ್ಲಿ ಶಾಸಕರನ್ನ ಮಾತ್ರ ನೇಮಕ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳವಾರ ಬೆಂಗಳೂರಿಗೆ ಆಗಮಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರ ಜೊತೆ ನಿಗಮ ಮಂಡಳಿ ಅಧ್ಯಕ್ಷರ ನೇಮಕ ಸಂಬಂಧ ಚರ್ಚಿಸಿದ ನಂತರ ಅವರು ಮಾತನಾಡಿದ್ದಾರೆ. ನಿಗಮಮಂಡಳಿ ಅಧ್ಯಕ್ಷರ ಹುದ್ದೆಗೆ ಎರಡು ಹಾಗೂ ಮೂರನೇ ಹಂತದಲ್ಲಿ ಪಕ್ಷದ ಕಾರ್ಯಕರ್ತರಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ನಿಗಮ ಮಂಡಳಿಗೆ ನೇಮಕದ ಪಟ್ಟಿ ಬಹುತೇಕ ಎಲ್ಲ ಫೈನಲ್ ಆಗಿದ್ದು, ಪಟ್ಟಿಯನ್ನು ಹೈಕಮಾಂಡ್ಗೆ ಕಳುಹಿಸಿ ಕೊಟ್ಟಿದ್ದೇವೆ ಎಂದು ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ