ಭದ್ರಾವತಿಯಲ್ಲಿ ಸಿಡಿಲು ಬಡಿದು ಸಹೋದರರಿಬ್ಬರು ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹಲವೆಡೆ ಮಳೆ ಸುರಿದಿದ್ದು, ಮಂಗಳವಾರ ರಾತ್ರಿ ಸಿಡಿಲು ಬಡಿದು ಭದ್ರಾವತಿಯ ಇಬ್ಬರು ಸಹೋದರರು ಸಾವಿಗೀಡಾಗಿದ್ದಾರೆ. ಭದ್ರಾವತಿ ಪಟ್ಟಣದ ಹುಣಸಕಟ್ಟೆ ಜಂಕ್ಷನ್‌ನಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು 32 ವರ್ಷದ ಎಸ್. ಬೀರೇಶ ಹಾಗೂ 30 ವರ್ಷದ ಎಸ್. ಸುರೇಶ ಎಂದು ಗುರುತಿಸಲಾಗಿದೆ.
ಗದ್ದೆಯಲ್ಲಿ ಕಟಾವು ಆಗಿದ್ದ ಭತ್ತ ಕಾಯಲು ತೆರಳಿದ್ದ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ.
ರಾತ್ರಿ ಗದ್ದೆಗೆ ಕಾವಲಿಗೆಂದು ಹೋಗಿದ್ದವರು ಬೆಳಗ್ಗೆ ಮನೆಗೆ ಬಾರದ ಕಾರಣ ಕುಟುಂಬಸ್ಥರು ಗದ್ದೆಗೆ ಹೋಗಿ ನೋಡಿದಾಗ, ಸಹೋದರರಿಬ್ಬರೂ ಮೃತಪಟ್ಟಿರುವುದು ಗೊತ್ತಾಗಿದೆ. ತಿಳಿದುಬಂದಿದೆ. ಮೃತದೇಹಗಳನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಿವಮೊಗ್ಗ ನಗರ, ಭದ್ರಾವತಿ, ಶಿಕಾಪಿಪುರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಂಗಳವಾರ ರಾತ್ರಿಯಿಡೀ ಭಾರಿ ಮಳೆ ಸುರಿದಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement