ನಕಲಿ ನೋಟು ಜಾಲ : ಕರ್ನಾಟಕದ ಬಳ್ಳಾರಿ ಸೇರಿ 4 ರಾಜ್ಯಗಳಲ್ಲಿ ಏಕಕಾಲದಲ್ಲಿ ಎನ್‌ ಐ ಎ ದಾಳಿ

ನವದೆಹಲಿ: ಕರ್ನಾಟಕದ ಬಳ್ಳಾರಿ ಜಿಲ್ಲೆ ಹಾಗೂ ಇತರ ಮೂರು ರಾಜ್ಯಗಳ ವಿವಿಧ ಸ್ಥಳಗಳಲ್ಲಿ ಶನಿವಾರ ಶೋಧ ಕಾರ್ಯ ನಡೆಸಿರುವ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ನಕಲಿ ನೋಟು ಜಾಲವನ್ನು ಭೇದಿಸಿದೆ.
ಉತ್ತರಪ್ರದೇಶ, ಬಿಹಾರ, ಮಹಾರಾಷ್ಟ್ರ, ಕರ್ನಾಟಕದಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಈ ಪ್ರಕರಣವು ಶಂಕಿತರಿಂದ ರೂಪಿಸಲಾದ ದೊಡ್ಡ ಪಿತೂರಿಗೆ ಸಂಬಂಧಿಸಿದ್ದು, ಕೆಲವರನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ.₹500, ₹200 ಮತ್ತು ₹100 ಮುಖಬೆಲೆಯ ನಕಲಿ ನೋಟುಗಳು, ಅದಕ್ಕೆ ಬಣಸಿದ ಮುದ್ರಣ ಕಾಗದ ಮತ್ತು ಇತರ ಡಿಜಿಟಲ್‌ ಸಾಧನಗಳನ್ನು ವಶಪಡಿಸಿಕೊಳ್ಳ‌ಲಾಗಿದೆ ಎಂದು ಎನ್‌ಐಎ ಮೂಲಗಳು ತಿಳಿಸಿವೆ.
ಗಡಿಯಾಚೆಯಿಂದ ನಕಲಿ ನೋಟು ಸಾಗಣೆ ಮಾಡಿ ಅದನ್ನು ದೇಶದಲ್ಲಿ ಚಲಾವಣೆಗೆ ತರಲು ಸಂಚು ರೂಪಿಸಿದ ಆರೋಪದಲ್ಲಿ ನವೆಂಬರ್‌ 24ರಂದು ದಾಖಲಾಗಿದ್ದ ಪ್ರಕರಣವನ್ನು ಆಧರಿಸಿ ಎನ್‌ಐಎ ಶೋಧ‌ ಕಾರ್ಯ ನಡೆಸಿದೆ ಎಂದು ಮೂಲಗಳು ಹೇಳಿವೆ.

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ರಾಹುಲ್ ತಾನಾಜಿ ಪಾಟೀಲ್ ಅಲಿಯಾಸ್ ‌ಜಾವೇದ್, ಉತ್ತರಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ವಿವೇಕ್‌ ಠಾಕೂರ್‌ ಅಲಿಯಾಸ್‌ ಆದಿತ್ಯ ಸಿಂಗ್‌ ಮತ್ತು‌ ಬಳ್ಳಾರಿ ಜಿಲ್ಲೆಯ ಮಹೇಂದ್ರ ಎಂಬವರಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆದಿದೆ ಎಂದು ಹೇಳಲಾಗಿದೆ.
ಮಹೇಂದ್ರ ಅವರ ಮನೆಯಿಂದ ನಕಲಿ ನೋಟು ಮುದ್ರಿಸುವ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ ಎಂದೂ ಹೇಳಿದೆ.
ಮಹಾರಾಷ್ಟ್ರದ ಯವತ್ಮಾಳ್‌ ಜಿಲ್ಲೆಯ ಶಿವ ಪಾಟೀಲ್‌ ಅಲಿಯಾಸ್‌ ಭೀಮರಾವ್‌ ಮತ್ತು ಬಿಹಾರದ ರೋಹತಾಸ್‌ ಜಿಲ್ಲೆಯ ಶಶಿಭೂಷಣ್‌ ಎಂಬುವವರಿಗೆ ಸೇರಿದ ಸ್ಥಳಗಳಲ್ಲೂ ಶೋಧ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement