ಬೆಳಗಾವಿ: ವಿಧಾನಸಭೆ ಸಭಾಂಗಣದಲ್ಲಿ ವೀರ್ ಸಾವರ್ಕರ್ ಫೋಟೋ ತೆರವಿಗಾಗಿ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.
ಬೆಳಗಾವಿ ಸುವರ್ಣಸೌಧದಲ್ಲಿ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, ವಿಧಾನಸಭೆ ಸಭಾಂಗಣದಲ್ಲಿರುವ ಸಾವರ್ಕರ್ ಭಾವಚಿತ್ರ ತೆರವುಗೊಳಿಸಲು ಯಾವುದೇ ಪ್ರಸ್ತಾವನೆ ಬಂದಿಲ್ಲ. ಪ್ರಸ್ತಾವನೆ ಬಂದ ಮೇಲೆ ಆ ಬಗ್ಗೆ ವಿಚಾರ ಮಾಡೋಣ. ಈಗಲೇ ಅದರ ಬಗ್ಗೆ ಏಕೆ..?
ಈ ವಿಚಾರವಾಗಿ ಸಂವಿಧಾನದ ಬದ್ದವಾಗಿ ಏನು ಮಾಡಬೇಕು ಅದರಂತೆ ನಡೆದುಕೊಳ್ಳುತ್ತೇನೆ. ನನಗೆ ಮಂತ್ರಿಗಳು ಒಂದೇ ಪ್ರತಿ ಪಕ್ಷದವರು ಒಂದೇ ಎಂದು ಸ್ಪೀಕರ್ ಖಾದರ್ ಹೇಳಿದರು.
ಸಾವರ್ಕರ್ ಫೋಟೋ ತೆರವು ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಜಾಪ್ರಭುತ್ವದಲ್ಲಿ ಹೇಳಿಕೆ ನೀಡಲು ಅವಕಾಶ ಇದೆ. ಆದರೆ ನಾನು ಯಾವುದೇ ವಿಚಾರ ಬಂದರೂ ಸಂವಿಧಾನ ಬದ್ದವಾಗಿಯೇ ನನ್ನ ಕರ್ತವ್ಯ ನಿಭಾಯಿಸುತ್ತೇನೆ ಎಂದರು.
ನಿಮ್ಮ ಕಾಮೆಂಟ್ ಬರೆಯಿರಿ