ಸುದ್ದಿಗೋಷ್ಠಿಗೆ ಮುನ್ನವೇ ಮಣಿಕಂಠ ರಾಠೋಡನ ವಶಕ್ಕೆ ಪಡೆದ ಪೊಲೀಸರು

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ನನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಆರೋಪ ಮಾಡಿರುವುದಕ್ಕೆ ಸಂಬಂಧಿಸಿದಂತೆ ಮಣಿಕಂಠ್ ರಾಠೋಡ್ ಸುದ್ದಿಗೋಷ್ಠಿ ಕರೆದಿದ್ದರು. ಆದರೆ ಸುದ್ದಿಗೋಷ್ಠಿಗೆ ಆಗಮಿಸುವ ಮುನ್ನವೇ ಮಣಿಕಂಠ್ ರಾಠೋಡ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಲಬುರಗಿ ನಗರದ ಭಾರತ್ ಪ್ರೈಡ್ ಅಪಾರ್ಟ್ಮೆಂಟ್‌ನಲ್ಲಿದ್ದ ಮಣಿಕಂಠ್ ರಾಠೋಡ್ ನನ್ನು ಇಂದು, ಗುರುವಾರ ಚೌಕ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೆಲವು ದಿನಗಳ ಮಣಿಕಂಠ್ ರಾಠೋಡ್ ಶಹಾಬಾದ್ ಬಳಿ ತನ್ನ ಮೇಲೆ ಪ್ರಿಯಾಂಕ್ ಖರ್ಗೆ ಹಲ್ಲೆ ಮಾಡಿಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ಆದರೆ ಹಲ್ಲೆಯಾಗಿಲ್ಲ, ಇದೆಲ್ಲ ಕಟ್ಟುಕತೆ, ಕಾರ್ ಅಪಘಾತವನ್ನು ಹಲ್ಲೆ ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ ಎಂಬುದು ಕಲಬುರಗಿ ಪೊಲೀಸರ ತನಿಖೆ ವೇಳೆ ಕಂಡುಬಂದಿತ್ತು.
ಇದರ ನಂತರ ಮಣಿಕಂಠ ರಾಡೋಡ್‌ ಸುದ್ದಿಗೋಷ್ಠಿ ಕರೆದಿದ್ದರು. ಆದರೆ ಸುದ್ದಿಗೋಷ್ಠಿಗೆ ಆಗಮಿಸುವ ಮುನ್ನವೇ ಕಲಬುರಗಿ ನಗರದ ಚೌಕ್ ಠಾಣೆ ಪೊಲೀಸರು ಭಾರತ್ ಫ್ರೈಡ್ ಅಪಾರ್ಟ್ಮೆಂಟ್‌ನಲ್ಲಿರುವ ಅವರ ಮನೆಗೆ ತೆರಳಿ ರಾಠೋಡ್‌ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

 

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement