ಬೆಂಗಳೂರಿನ 6 ಕಡೆ ಎನ್ ಐಎ ದಾಳಿ

ಬೆಂಗಳೂರು: ರಾಜಧಾನಿಯ ಒಟ್ಟು 6 ಕಡೆಗಳಲ್ಲಿ ಇಂದು, ಬುಧವಾರ ಬೆಳ್ಳಂಬೆಳಿಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶಂಕಿತ ಉಗ್ರ ನಸೀರ್ ಎಂಬಾತ ನೀಡಿರುವ ಮಾಹಿತಿ ಮೇರೆಗೆ ಎನ್ಐಎ ಈ ದಾಳಿ ನಡೆಸಿದೆ ಎಂದು ಹೇಳಲಾಗಿದೆ.
ಈ ಹಿಂದೆ ಹೆಬ್ಬಾಳದಲ್ಲಿ ಗ್ರೇನೇಡ್ ದೊರೆತ ಪ್ರಕರಣದ ಬಗ್ಗೆ ಎಫ್‌ಐಆರ್ ದಾಖಲಾಗಿತ್ತು. ಆರ್‌ಟಿ ನಗರದ ಮನೆಯೊಂದರಲ್ಲಿ ಗ್ರೆನೇಡ್ ಹಾಗು ಪಿಸ್ತೂಲ್ ಸಿಕ್ಕಿತ್ತು. ಈ ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿದ್ದು, ತನಿಖಾ ಸಂಸ್ಥೆ ಈಗ ತನಿಖೆ ನಡೆಸುತ್ತಿದೆ.
ಬಂಧಿತ ಶಂಕಿತ ಉಗ್ರ ಈ ವಿಚಾರದಲ್ಲಿ ಅನೇಕ ಸಂಗತಿಗಳ ಬಗ್ಗೆ ಮಾಹಿತಿ ನೀಡಿದ್ದ ಎಂದು ಹೇಳಲಾಗಿದ್ದು, ಆತನಿಂದ ಪಡೆದ ಮಾಹಿತಿಯಂತೆ ದಾಳಿ ನಡೆಸಲಾಗಿದೆ.

ನಗರದಲ್ಲಿ ಬಂಧನವಾಗಿದ್ದ ಐವರು ಶಂಕಿತ ಉಗ್ರರ ಪ್ರಕರಣಕ್ಕೆ ಸಂಬಂಧಿಸಿ ದಾಳಿಗಳು ನಡೆದಿವೆ. ಮುದಾಸಿರ್, ಜಾಹಿದ್, ತಬ್ರೇಜ್ ಮಹಮದ್ ಉಮರ್ ಸೇರಿ ಐವರನ್ನು ಬಂಧಿಸಲಾಗಿತ್ತು. ಹೆಬ್ಬಾಳ ಠಾಣಾ ವ್ಯಾಪ್ತಿಯ ಸುಲ್ತಾನ್ ಪಾಳ್ಯದಲ್ಲಿ ಮೊದಲು ಸಿಸಿಬಿ ಅಧಿಕಾರಿಗಳು ಜುಲೈ 1ರಂದು ದಾಳಿ ಮಾಡಿದ್ದರು. ಈ ವೇಳೆ 7 ನಾಡ ಪಿಸ್ತೂಲ್, 45 ಜೀವಂತ ಗುಂಡು, ಗ್ರನೇಡ್ ಹಾಗೂ ವಾಕಿಟಾಕಿಗಳು ಪತ್ತೆಯಾಗಿದ್ದವು.
ಇತ್ತೀಚೆಗಷ್ಟೇ ಪ್ರಕರಣವು ಎನ್‌ಐಎಗೆ ವರ್ಗಾವಣೆಯಾಗಿತ್ತು.. ವಿಚಾರಣೆಯ ವೇಳೆ ಜುನೈದ್ ಎಂಬಾತ ವಿದೇಶದಿಂದಲೇ ಆಪರೇಟ್ ಮಾಡುತ್ತಿದ್ದ ವಿಚಾರ ಬೆಳಕಿಗೆ ಬಂದಿತ್ತು. ಅಲ್ಲದೆ, ಸರಣಿ ಬಾಂಬ್ ಬ್ಲಾಸ್ಟ್ ರೂವಾರಿ ನಾಸೀರ್ ಜೈಲಿನಲ್ಲಿ ಈ ಶಂಕಿತರಿಗೆ ಭಯೋತ್ಪಾದಕ ಕೃತ್ಯಗಳ ತರಬೇತಿ ನೀಡಿದ್ದ ಎಂದು ಗೊತ್ತಾಗಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣದ ತನಿಖೆಗೆ ಎಸ್​ಐಟಿ ರಚನೆ: ಸಿಎಂ ಸಿದ್ದರಾಮಯ್ಯ

ಉಗ್ರ ಕೃತ್ಯಗಳಿಗೆ ತರಬೇತಿ ನೀಡುತ್ತಿದ್ದ ನಾಸೀರ್‌ ಹಾಗೂ ಜುನೈದ್‌, ಲವ್‌ ಜಿಹಾದ್‌ ಹಾಗೂ ಮತಾಂತರ ನಡೆಸುವ ಕುರಿತೂ ತರಬೇತಿ ನೀಡುತ್ತಿದ್ದರು ಎಂದು ಗೊತ್ತಾಗಿದೆ. ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಸ್ಥೆ ಐಸಿಸ್‌ ಜೊತೆಗೆ ಇವರು ನಂಟು ಹೊಂದಿರುವ ಶಂಕೆಯಿದ್ದು, ಹೆಚ್ಚಿನ ವಿವರಗಳು ಬಯಲಾಗಬೇಕಿವೆ.
ಈ‌ ಸಂಬಂಧ ತನಿಖೆ ನಡೆಸುತ್ತಿರುವ ಎನ್‌ಐಎ ಇಂದು, ಬುಧವಾರ ನಡೆಸಿರುವ ದಾಳಿಯಲ್ಲಿ ಆರು ಕಡೆ ಮನೆಗಳ ಪರಿಶೀಲನೆ ಮಾಡಿದೆ. ಸದ್ಯ ಕೆಲವರನ್ನು ಪ್ರಶ್ನಿಸಲಾಗುತ್ತಿದ್ದು, ಸದ್ಯ ಯಾವುದೇ ಬಂಧನದ ಮಾಹಿತಿ ಇಲ್ಲ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement