ಚೆನ್ನೈ: ಕ್ರಿಕೆಟಿಗ ಎಂ.ಎಸ್. ಧೋನಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ಸಂಪತಕುಮಾರ ಅವರಿಗೆ ಮದ್ರಾಸ್ ಹೈಕೋರ್ಟ್ ಶುಕ್ರವಾರ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ.
ನ್ಯಾಯಮೂರ್ತಿಗಳಾದ ಎಸ್. ಎಸ್. ಸುಂದರ ಮತ್ತು ಸುಂದರ ಮೋಹನ ಅವರಿದ್ದ ನೇತೃತ್ವದ ವಿಭಾಗೀಯ ಪೀಠವು ಕುಮಾರ ಅವರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿ ಶಿಕ್ಷೆಯನ್ನು ಮೂವತ್ತು ದಿನಗಳವರೆಗೆ ಅಮಾನತುಗೊಳಿಸಿತು.
2013ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ನಲ್ಲಿ ಭಾಗಿಯಾಗಿದ್ದಾರೆ ಎಂದು ದುರುದ್ದೇಶಪೂರಿತ ಹೇಳಿಕೆ ಮತ್ತು ಸುದ್ದಿ ವರದಿಗಳ ಆರೋಪದ ಮೇಲೆ ಧೋನಿ ಅವರು ಖಾಸಗಿ ಸುದ್ದಿ ವಾಹಿನಿ, ಸಂಪತ್ ಕುಮಾರ ಮತ್ತು ಇತರರ ವಿರುದ್ಧ ಹೈಕೋರ್ಟ್ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ಐಪಿಎಲ್ ಬೆಟ್ಟಿಂಗ್ ಹಗರಣದ ಬಗ್ಗೆ ಆರಂಭದಲ್ಲಿ ತನಿಖೆ ನಡೆಸಿದ ಸಂಪತಕುಮಾರ ಸೇರಿದಂತೆ ಪ್ರತಿವಾದಿಗಳು ಈ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ನೀಡುವುದು ಅಥವಾ ಪ್ರಕಟಿಸುವುದನ್ನು ತಡೆಯಲು ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಧೋನಿ ಕೋರ್ಟ್ ಮೊರೆ ಹೋಗಿದ್ದರು.
ಧೋನಿ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಈ ಹಿಂದೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ