ನವದೆಹಲಿ: ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದಲ್ಲಿ ದೆಹಲಿ ಪೊಲೀಸರು ಇಂದು, ಶನಿವಾರ (ಡಿಸೆಂಬರ್ ೧೬) ಆರನೇ ವ್ಯಕ್ತಿಯನ್ನು ಬಂಧಿಸಿದ್ದಾರೆ.
‘ಮಾಸ್ಟರ್ ಮೈಂಡ್’ ಲಲಿತ್ ಝಾ ದೆಹಲಿಯಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪದ ಮೇಲೆ ಮಹೇಶ ಕುಮಾವತ ಎಂಬಾತನನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
2001 ರ ದಾಳಿಯ 22ನೇ ಕರಾಳ ವಾರ್ಷಿಕ ದಿನದಂದು ಡಿಸೆಂಬರ್ 13 ರ ಘಟನೆಯನ್ನು ಮರುಸೃಷ್ಟಿಸಲು ಪೊಲೀಸರು ಸಂಸತ್ತಿನ ಅನುಮತಿಯನ್ನು ಪಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಪಶ್ಚಿಮ ಬಂಗಾಳ ಮೂಲದ ಲಲಿತ್ ಝಾನನ್ನು ಶುಕ್ರವಾರ ರಾತ್ರಿ ಬಂಧಿಸಿದ ನಂತರ ಶುಕ್ರವಾರ ಏಳು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಸಂಸತ್ತಿನ ಭದ್ರತೆಯನ್ನು ಉಲ್ಲಂಘಿಸುವ ಸಂಚು ರೂಪಿಸಲು ಆರೋಪಿಗಳು ಹಲವು ಬಾರಿ ಭೇಟಿಯಾಗಿದ್ದರು ಎಂದು ಅವರು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ ಹೇಳಿದ್ದಾರೆ.
ಅಲ್ಲದೆ, ಆರೋಪಿಯು ಯಾವುದೇ ಶತ್ರು ದೇಶ ಅಥವಾ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾನೆಯೇ ಎಂದು ಖಚಿತಪಡಿಸಿಕೊಳ್ಳಲು ಅವರನ್ನು ವಿಚಾರಣೆಗೆ ಒಳಪಡಿಸಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ