ಬೆಂಗಳೂರು: ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಸುದ್ದಿಯಾಗುವ ಸ್ಯಾಂಡಲ್ ವುಡ್ ನಟ ಚೇತನ್ ಅಹಿಂಸ ವಿರುದ್ಧ ದೂರು ದಾಖಲಾಗಿದೆ.
ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಬಗ್ಗೆ ಅಪಮಾನವಾಗುವ ರೀತಿಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ ಆರೋಪದ ಮೇಲೆ ನಟ ಚೇತನ್ ಅಹಿಂಸಾ ವಿರುದ್ಧ ವಕೀಲ ಆರ್ಎಲ್ಎನ್ ಮೂರ್ತಿ ಅವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಟ ಚೇತನ್ ಅವರು ತಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್ನಲ್ಲಿ ಕೆಂಪೇಗೌಡರ ಬಗ್ಗೆ ಅಪಮಾನ ಮಾಡಲಾಗಿದೆ ಎಂದು ವಕೀಲ ಆರ್ ಎಲ್ ಎನ್ ಮೂರ್ತಿ ಎಂಬುವರು ದೂರು ನೀಡಿದ್ದು, ‘ನಟ ಎಂದು ಹೇಳಿಕೊಳ್ಳುವ ವಿದೇಶಿ ಪ್ರಜೆಯಾದ ಚೇತನ್ ಅವರಿಂದ ನಾಡಪ್ರಭು ಕೆಂಪೇಗೌಡರಿಗೆ ಅವಹೇಳನವಾಗಿದೆ ಎಂದು ಆರೋಪ ಮಾಡಿದ್ದಾರೆ.
ಚೇತನ್ ಏನು ಟ್ವೀಟ್ ಮಾಡಿದ್ದರು..?
ಅವರು ಟಿಪ್ಪು ಸುಲ್ತಾನ್ ಹಾಗೂ ಕೆಂಪೇಗೌಡರ ನಡುವೆ ಹೋಲಿಕೆ ಮಾಡಿ ಟ್ವೀಟ್ ಮಾಡಿದ್ದರು.
ಇಬ್ಬರು ಯೋಧರ ಕಥೆ:
ಕೆಂಪೇಗೌಡ – ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ
ಟಿಪ್ಪು ಸುಲ್ತಾನ್ – ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ, ಅವರ ಜನ್ಮವು ಮುಸ್ಲಿಮ ಸಮುದಾಯದಲ್ಲಾಗಿದ್ದು ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ
ದುರದೃಷ್ಟವಶಾತ್, ಒಬ್ಬ ವ್ಯಕ್ತಿಯು ಜನಿಸಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ
ಈ ರೀತಿ ಪೋಸ್ಟ್ ಹಾಕಿದ್ದರಿಂದ ನಾಡಪ್ರಭು ಕೆಂಪೇಗೌಡರಿಗೆ ಅಗೌರವ ಉಂಟಾಗಿದೆ ಎಂದು ಆರೋಪಿಸಿ ವಕೀಲ ಆರ್ ಎಲ್ ಎನ್ ಮೂರ್ತಿ ಅವರು ನೀಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ