ಲೋಕಸಭೆಯಲ್ಲಿ ಟೆಲಿಕಾಂ ಮಸೂದೆ ಮಂಡನೆ ; ‘ರಾಷ್ಟ್ರೀಯ ಭದ್ರತೆ’ ಸಂದರ್ಭದಲ್ಲಿ ಸೇವೆ ಸ್ಥಗಿತ, ಸ್ವಾಧೀನಕ್ಕೆ ಅವಕಾಶ

ನವದೆಹಲಿ: ದೂರಸಂಪರ್ಕ ವಲಯವನ್ನು ನಿಯಂತ್ರಿಸುವ 138 ವರ್ಷಗಳಷ್ಟು ಹಳೆಯದಾದ ಭಾರತೀಯ ಟೆಲಿಗ್ರಾಫ್ ಕಾಯಿದೆಯನ್ನು ಬದಲಾಯಿಸಲು ಕೇಂದ್ರ ಸರ್ಕಾರ ಸೋಮವಾರ ದೂರಸಂಪರ್ಕ ಮಸೂದೆ-2023 ಅನ್ನು ಲೋಕಸಭೆಯಲ್ಲಿ ಮಂಡಿಸಿದೆ.
ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಸೋಮವಾರ ಲೋಕಸಭೆಯಲ್ಲಿ ಟೆಲಿಕಾಂ ಮಸೂದೆಯನ್ನು ಮಂಡಿಸಿದರು.
ಪ್ರಸ್ತಾವಿತ ಮಸೂದೆಯು ರಾಷ್ಟ್ರೀಯ ಭದ್ರತೆ ಉಲ್ಲೇಖಿಸಿ, ಯಾವುದೇ ದೂರಸಂಪರ್ಕ ಸೇವೆಗಳನ್ನು ಸ್ಥಗಿತಗೊಳಿಸಬಹುದಾಗಿದೆ. ಅಲ್ಲದೆ, ನೆಟ್‌ವರ್ಕ್‌ಗಳು ಅಥವಾ ಅವುಗಳ ಘಟಕಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು, ನಿರ್ವಹಿಸಲು ಅಥವಾ ಅಮಾನತುಗೊಳಿಸಲು ಕೇಂದ್ರ ಸರ್ಕಾರಕ್ಕೆ ಅಧಿಕಾರ ನೀಡಲಿದೆ.

ಮಸೂದೆಯು ನಿರ್ದಿಷ್ಟ ವ್ಯಕ್ತಿಗಳಿಂದ ಕಳುಹಿಸಲಾದ ಅಥವಾ ಸ್ವೀಕರಿಸಿದ ನಿರ್ದಿಷ್ಟ ದೂರಸಂಪರ್ಕ ಸಾಧನಗಳ ಮೂಲಕ ಅಥವಾ ನಿರ್ದಿಷ್ಟ ವಿಷಯಗಳಿಗೆ ಸಂಬಂಧಿಸಿದ ಕೆಲವು ಸಂದೇಶಗಳು “ಭಾರತದ ಸಾರ್ವಭೌಮತೆ, ಸಮಗ್ರತೆ ಮತ್ತು ರಾಷ್ಟ್ರೀಯ ಭದ್ರತೆ ವಿಷಯಗಳಿಗೆ ಧಕ್ಕೆ ತರುವಂತಿರಬಾರದು” ಎಂದು ಸೂಚನೆ ನೀಡುವ ಅಧಿಕಾರವನ್ನು ಸರ್ಕಾರಕ್ಕೆ ನೀಡಲಿದೆ.
ವಿಪತ್ತು ನಿರ್ವಹಣೆ ಸೇರಿದಂತೆ ಯಾವುದೇ ಸಾರ್ವಜನಿಕ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಅಥವಾ ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ, ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದಿಂದ ವಿಶೇಷವಾಗಿ ಅಧಿಕಾರ ಪಡೆದ ಅಧಿಕಾರಿ, ಅಧಿಸೂಚನೆಯ ಮೂಲಕ ಯಾವುದೇ ಅಧಿಕೃತ ಘಟಕದ ಯಾವುದೇ ದೂರಸಂಪರ್ಕ ಸೇವೆ ಅಥವಾ ದೂರಸಂಪರ್ಕ ಜಾಲವನ್ನು ತಾತ್ಕಾಲಿಕವಾಗಿ ಸ್ವಾಧೀನಪಡಿಸಿಕೊಳ್ಳಬಹುದು ಅಥವಾ ಸ್ಥಗಿತಗೊಳಿಸಬಹುದು ಎಂದು ಅದು ಹೇಳುತ್ತದೆ.

ಪ್ರಮುಖ ಸುದ್ದಿ :-   ಎಎಪಿ ನಾಯಕಿ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ವಿವಾದ ; ಮಲಿವಾಲ್‌ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ, ಪ್ರಶ್ನೆಗೆ ಉತ್ತರಿಸದೆ ಮೈಕ್‌ ಮತ್ತೊಬ್ಬರಿಗೆ ಕೊಟ್ಟ ಕೇಜ್ರಿವಾಲ್

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement