ಶಿರೂರು : ಸಮುದ್ರದಲ್ಲಿ ಮಗುಚಿದ ದೋಣಿ, ಇಬ್ಬರು ಮೀನುಗಾರರು ಸಾವು

ಉಡುಪಿ: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಬೈಂಂದೂರು ತಾಲೂಕು ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ.
ಮೃತರನ್ನು ಶಿರೂರಿನ ಹಡವಿನಕೋಣೆಯ ನನ್ನು ಅಬ್ಸುಲ್ ಸತ್ತರ್ (45 ) ಹಾಗೂ ಕುದ್ವಾಯಿ ರೋಡ್‌ ಭಟ್ಕಳದ ಮಿಸ್ಬಾ ಯೂಸುಫ್ (48) ಎಂದು ಗುರುತಿಸಲಾಗಿದೆ.
ಭಾನುವಾರ ರಾತ್ರಿ 10 ಗಂಟೆಗೆ ಶಿರೂರು ಕಳುಹಿತ್ಲುನಿಂದ ಮೀನುಗಾರಿಕೆಗೆ ತೆರಳಿದ ನುಮೈರಾ ಅಂಜುಮ್ ಎಂಬ ದೋಣಿಯಲ್ಲಿ 3 ಜನ ಮೀನುಗಾರಿಕೆಗೆ ತೆರಳಿದ್ದು, ಮೀನುಗಾರಿಕೆ ನಡೆಸಿ ವಾಪಾಸ್‌ ಬರುವಾಗ ಭಾನುವಾರ ತಡರಾತ್ರಿ 01:30 ಗಂಟೆಗೆ ಶಿರೂರು ಕಳುಹಿತ್ಲು ಅಳಿವೆ ಸಮೀಪ ಅರಬ್ಬೀ ಸಮುದ್ರದಲ್ಲಿ ದೋಣಿ ಮಗುಚಿದೆ. ದೋಣಿಯಲ್ಲಿದ್ದ ನನ್ನು ಅಬ್ಸುಲ್ ಸತ್ತರ್ ಮತ್ತು ಮಿಸ್ಬಾ ಯೂಸುಫ್ ಮೃತಪಟ್ಟಿದ್ದಾರೆ.
ದೋಣಿಯಲ್ಲಿದ್ದ ಮತ್ತೋರ್ವ ಬುಡ್ಡು ಮುಖ್ತಾರ್ ಹಡವಿನಕೋಣೆ (37) ಅವರನ್ನು ಇನ್ನೊಂದು ದೋಣಿಯಲ್ಲಿದ್ದ ಮಾಮ್ಸು ಯಾಕೂಬ್ ಎಂಬವರು ರಕ್ಷಣೆ ಮಾಡಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement