ಬೆಳ್ತಂಗಡಿ : ಕುಡಿದ ಮತ್ತಿನಲ್ಲಿ ಪತ್ನಿಯ ಕಣ್ಣು, ಕೆನ್ನೆ ಕಚ್ಚಿ ಮಾಂಸ ಹೊರತೆಗೆದ ಪತಿ…!

ಮಂಗಳೂರು : ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಹೆಂಡತಿ ಮೇಲೆ ಹಾಗೂ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಶಿಶಿಲ ಕೋಟೆ ಬಾಗಿಲು ನಿವಾಸಿ ಸುರೇಶ ಗೌಡ ಎಂಬಾತ ಪತ್ನಿ ಮೇಲೆ ಹಲ್ಲೆ ನಡೆಸಿರುವ ಆರೋಪಿ ಎಂದು ಗುರುತಿಸಲಾಗಿದೆ. ಸೋಮವಾರ ತಡರಾತ್ರಿ ಕುಡಿದು ಬಂದ ಈತ ಮನೆಯಲ್ಲಿ ಜಗಳ ಶುರು ಮಾಡಿದ್ದಾನೆ. ನಂತರ ರಾತ್ರಿ 12:45ರ ಸುಮಾರಿಗೆ ಪತ್ನಿ ಹಾಗೂ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಕುಡಿದ ಮತ್ತಿನಲ್ಲಿ ಪತ್ನಿಯ ಕಣ್ಣು ಹಾಗೂ ಮುಖದ ಭಾಗಕ್ಕೆ ಕಚ್ಚಿ ಮಾಂಸ ಹೊರತೆಗೆದಿದ್ದಾನೆ.

ದೊಣ್ಣೆಯಿಂದ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಬಿಡಿಸಲು ಬಂದ ಮಗಳ ತಲೆಗೆ ಹೊಡೆದಿದ್ದಾನೆ. ಈ ವೇಳೆ ಮಗಳು ತಪ್ಪಿಸಿಕೊಂಡು ಹೋಗಿ ನೆರೆ ಹೊರೆಯವರಿಗೆ ವಿಚಾರ ತಿಳಿಸಿದ್ದಾಳೆ. ಗಂಡನಿಂದ ಜೀವ ಉಳಿಸಿಕೊಳ್ಳಲು ಪತ್ನಿಯೂ ಮನೆಯಿಂದ ಓಡಿ ಹೋಗಿದ್ದು, ಮಂಗಳವಾರ ಬೆಳಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ರಾತ್ರಿ ನೆರೆ ಹೊರೆಯವರು ಬರುತ್ತಿದ್ದಂತೆ ಆರೋಪಿ ಓಡಿ ಹೋಗಿದ್ದಾನೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ತಾಯಿ ಮಗಳನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆ ಸಂಬಂಧ ಬೆಳ್ತಂಗಡಿಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement