ಮೋದಿ, ಶಾ ಜೇಬುಗಳ್ಳರು ಹೇಳಿಕೆ : ರಾಹುಲ್‌ ಗಾಂಧಿಗೆ ಈಗ ಮತ್ತೊಂದು ಸಂಕಷ್ಟ

ನವದೆಹಲಿ: ನವೆಂಬರ್ 22ರಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಉದ್ಯಮಿ ಗೌತಮ್ ಅದಾನಿ ಅವರನ್ನು ‘ಜೇಬುಗಳ್ಳರು’ ಎಂದು ಕರೆದಿದ್ದಕ್ಕಾಗಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್ ಗುರುವಾರ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ನಿರ್ದೇಶನ ನೀಡಿದೆ.
ಹೇಳಿಕೆಯು “ಉತ್ತಮ ಅಭಿರುಚಿಯಲ್ಲಿಲ್ಲ” ಎಂದು ದೆಹಲಿ ಹೈಕೋರ್ಟ್ ಹೇಳಿದೆ ಮತ್ತು ಎಂಟು ವಾರಗಳಲ್ಲಿ ಕಾನೂನಿನ ಪ್ರಕಾರ ಕಾರ್ಯನಿರ್ವಹಿಸಲು ಚುನಾವಣಾ ಆಯೋಗಕ್ಕೆ ಸೂಚಿಸಿದೆ.
ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ ಮತ್ತು ನ್ಯಾಯಮೂರ್ತಿ ಮಿನಿ ಪುಷ್ಕರ್ಣ ಅವರನ್ನೊಳಗೊಂಡ ಪೀಠವು ನವೆಂಬರ್ 23 ರಂದು ರಾಹುಲ್ ಗಾಂಧಿಗೆ ನೀಡಲಾದ ನೋಟಿಸ್ ಕುರಿತು ಎಂಟು ವಾರಗಳಲ್ಲಿ ನಿರ್ಧರಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಉದ್ಯಮಿ ಗೌತಮ್ ಅದಾನಿಯನ್ನು “ಪಿಕ್‌ಪಾಕೆಟ್‌ಗಳು” ಎಂದು ಕರೆದಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನಡೆಸುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಮೊರೆ ಹೋಗಿದ್ದ ಭರತ ನಗರ ಎಂಬ ವಕೀಲರು ಪ್ರಧಾನಿ ಮೋದಿ ಅವರನ್ನು ಪನೌತಿ (ಅಪಶಕುನ) ಎಂದು ರಾಹುಲ್‌ ಗಾಂಧಿ ಜರೆದಿರುವುದೂ ಸೇರಿದಂತೆ ಅವರ ವಿವಿಧ ಸಾರ್ವಜನಿಕ ಹೇಳಿಕೆಗಳ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಕೋರಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದರೂ ಅವರಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮಿನಿ ಪುಷ್ಕರ್ಣ ಅವರಿಗೆ ಚುನಾವಣಾ ಆಯೋಗ ತಿಳಿಸಿತು.

ಪ್ರಮುಖ ಸುದ್ದಿ :-   ಕಾಂಗ್ರೆಸ್ಸಿಗೆ ಮುಸ್ಲಿಂ ಮತಗಳು ಬೇಕು, ಆದರೆ ಟಿಕೆಟ್‌ ಕೊಡಲ್ಲ : ಕಾಂಗ್ರೆಸ್‌ ಬಗ್ಗೆ ನಸೀಂ ಖಾನ್ ತೀವ್ರ ಅಸಮಾಧಾನ, ಹುದ್ದೆಗೆ ರಾಜೀನಾಮೆ

ರಾಹುಲ್‌ ಅವರ ಹೇಳಿಕೆಗಳು ಕೀಳು ಅಭಿರುಚಿಯಿಂದ ಕೂಡಿವೆ ಎಂದ ನ್ಯಾಯಾಲಯು ಎಂಟು ವಾರಗಳಲ್ಲಿ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿತು. ಆದರೆ ಅರ್ಜಿದಾರರು ಕೋರಿದ್ದಂತೆ, ರಾಹುಲ್ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಇಲ್ಲವೇ ಚುನಾವಣಾ ಭಾಷಣಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ ರೂಪಿಸಲು ನ್ಯಾಯಾಲಯ ನಿರಾಕರಿಸಿತು.
“ಭಾಷಣ ಕೀಳು ಅಭಿರುಚಿಯಿಂದ ಕೂಡಿರಬಹುದು. ಆದರೆ, ಈ ಬಗ್ಗೆ ತೊಂದರೆಗೊಳಗಾದ ಕಕ್ಷಿದಾರರೇ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ (ಪಿಎಂ ಮೋದಿ, ಅಮಿತ್ ಶಾ ಮತ್ತು ಗೌತಮ್ ಅದಾನಿ)… ಚುನಾವಣೆಯಲ್ಲಿ ಜನ ಫಲಿತಾಂಶ ನೀಡುತ್ತಾರೆ. ಎಲ್ಲದರಲ್ಲೂ ನ್ಯಾಯಾಲಯ ಹಸ್ತಕ್ಷೇಪ ಮಾಡಲಾಗದು… ನಾವು ಸಂಸತ್ತಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ನ್ಯಾಯಾಲಯ ಸಾರ್ವಭೌಮ ಸಂಸ್ಥೆಯಾದರೆ ಸಂಸತ್ತು ಸಹ ಸಾರ್ವಭೌಮ ಸಂಸ್ಥೆಯೇ ಆಗಿದೆ ಎಂದು ತಿಳಿಸಿದ ಪೀಠ ಅರ್ಜಿ ವಿಲೇವಾರಿ ಮಾಡಿತು.
ನವೆಂಬರ್ 22 ರಂದು ರಾಜಸ್ಥಾನದ ನದ್ಬಾಯಿಯಲ್ಲಿ ಚುನಾವಣಾ ಭಾಷಣ ಮಾಡಿದ್ದ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಹಾಗೂ ಶಾ ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಾರೆ, ಉದ್ಯಮಿ ಗೌತಮ್ ಅದಾನಿ ಜನರ ಜೇಬುಗಳಿಗೆ ಕೈ ಹಾಕುತ್ತಾರೆ. ಜೇಬುಗಳ್ಳರು ಈ ರೀತಿ ಮಾಡುತ್ತಾರೆ ಎಂಬ ಆರೋಪಗಳನ್ನು ಮಾಡಿದ್ದರು ಎಂದು ಅರ್ಜಿದಾರ ಭರತ ನಗರ ಆರೋಪಿಸಿದ್ದರು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣ : ತನಿಖೆಗೆ ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement