ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ ಸಿಂಗ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ(ಡಬ್ಲ್ಯುಎಫ್ಐ)ದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದನ್ನು ವಿರೋಧಿಸಿ ರಿಯೊ ಒಲಿಂಪಿಕ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರು ಕುಸ್ತಿಗೆ ವಿದಾಯ ಹೇಳಿದ್ದು, ಅವರನ್ನು ಬೆಂಬಲಿಸಿ ಹಲವು ಕುಸ್ತಿ ಪಟುಗಳು ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಮಾಡುತ್ತಿದ್ದಾರೆ.
ಶುಕ್ರವಾರ ಕುಸ್ತಿ ಪಟು ಬಜರಂಗ್ ಪೂನಿಯಾ ಅವರು ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ. ಅವರು ಪ್ರಧಾನಿ ನಾವಿಸ ಹೊರಗಿನ ಪಾದಚಾರಿ ಮಾರ್ಗದಲ್ಲಿ ಇದರ ಬೆನ್ನಲ್ಲೇ ಇಂದು ಮತ್ತೊಬ್ಬ ಕುಸ್ತಿಪಟು, ರಿಯೊ ಒಲಿಂಪಿಕ್ ಚಿನ್ನದ ಪದಕ ವಿಜೇತ ವೀರೇಂದ್ರ ಸಿಂಗ್ ಯಾದವ್ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಸರ್ಕಾರಕ್ಕೆ ಹಿಂದಿರುಗಿಸುವುದಾಗಿ ಹೇಳಿದ್ದಾರೆ.
“ನನ್ನ ಸಹೋದರಿ ಮತ್ತು ದೇಶದ ಮಗಳಿಗಾಗಿ ನಾನು ಪದ್ಮಶ್ರೀಯನ್ನು ಹಿಂದಿರುಗಿಸುತ್ತೇನೆ. ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಜೀ, ನಿಮ್ಮ ಮಗಳು ಮತ್ತು ನನ್ನ ಸಹೋದರಿ ಸಾಕ್ಷಿ ಮಲಿಕ್ ಅವರ ಬಗ್ಗೆ ನನಗೆ ಹೆಮ್ಮೆ ಇದೆ” ಎಂದು ವೀರೇಂದ್ರ ಸಿಂಗ್ ಯಾದವ್ ಅವರು ಎಕ್ಸ್ ನಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದಾರೆ.
ಅಲ್ಲದೆ ದೇಶದ ಅಪ್ರತಿಮ ಕ್ರೀಡಾಪಟುಗಳಾದ ಸಚಿನ್ ತೆಂಡೂಲ್ಕರ್ ಮತ್ತು ನೀರಜ್ ಚೋಪ್ರಾ ಅವರು ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
“ದೇಶದ ಅಗ್ರ ಆಟಗಾರರು ತಮ್ಮ ನಿರ್ಧಾರವನ್ನು ಪ್ರಕಟಿಸುವಂತೆ ನಾನು ವಿನಂತಿಸುತ್ತೇನೆ” ಎಂದು ವೀರೇಂದ್ರ ಅವರು ತಮ್ಮ ಪೋಸ್ಟ್ನಲ್ಲಿ ಕ್ರಿಕೆಟ್ ದಂತಕಥೆ ತೆಂಡೂಲ್ಕರ್ ಮತ್ತು ಒಲಿಂಪಿಕ್ ಚಾಂಪಿಯನ್ ಜಾವೆಲಿನ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರನ್ನು ಟ್ಯಾಗ್ ಮಾಡಿದ್ದಾರೆ.
ವೀರೇಂದ್ರ ಅವರು 2021 ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀಯನ್ನು ಸ್ವೀಕರಿಸಿದ್ದರು.
ಮಾಜಿ ಒಲಿಂಪಿಯನ್ ಸಾಕ್ಷಿ ಮಲಿಕ್ ಗುರವಾರ ತಮ್ಮ ಬೂಟ್ ಮೇಜಿನ ಮೇಲಿಟ್ಟು ನಿವೃತ್ತಿ ಘೋಷಿಸಿದ್ದರೆ, ಶುಕ್ರವಾರ ವಿಶ್ವ ಚಾಂಪಿಯನ್ ಬಜ್ರಂಗ್ ಪೂನಿಯಾ ತಮಗೆ ಸಿಕ್ಕ ಪದ್ಮಶ್ರೀ ಪ್ರಶಸ್ತಿಯನ್ನು ಮರಳಿಸುವುದಾಗಿ ಘೋಷಿಸಿದ್ದಾರೆ. ಪ್ರಶಸ್ತಿಯನ್ನು ನೀಡಲು ಹೋಗುತ್ತಿದ್ದ ಅವರಿಗೆ ತಡೆಯೊಡ್ಡಿದ್ದ ಕಾರಣ ಪದಕವನ್ನು ಅವರು ನವದೆಹಲಿಯ ಕರ್ತವ್ಯ ಪಥದ ಫುಟ್ಪಾತ್ನಲ್ಲಿಟ್ಟು ಮರಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ