ಮಂಗಳೂರು- ಮಡಗಾಂವಗೆ ವಂದೇ ಭಾರತ ರೈಲು ಸಂಚಾರಕ್ಕೆ ಚಾಲನೆ : ಕಾರವಾರದಲ್ಲಿ ಹರ್ಷೋದ್ಗಾರಗಳೊಂದಿಗೆ ಸ್ವಾಗತ

ಕಾರವಾರ: ಭಾರತೀಯ ರೈಲ್ವೆ ಇಲಾಖೆಯ ಅತಿ ವೇಗ ಸುಸಜ್ಜಿತ ರೈಲು ಎನಿಸಿರುವ ವಂದೇ ಭಾರತ ರೈಲು ಮಂಗಳೂರಿನಿಂದ ಮಡಗಾಂವಗೆ ಓಡಾಟ ಆರಂಭಿಸಿದ್ದು ಜಿಲ್ಲಾ ಕೇಂದ್ರ ಕಾರವಾರ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ವಂದೇ ಭಾರತ ರೈಲಿಗೆ ಹರ್ಷೋದ್ಗಾರಗಳೊಂದಿಗೆ ಸ್ವಾಗತ ಕೋರಲಾಯಿತು.
ಕಾರವಾರ ರೈಲ್ವೆ ನಿಲ್ದಾಣಕ್ಕೆ ರೈಲು ಆಗಮಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಯಕಾರ ಕೂಗಿದರು. ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕ ಸತೀಶ ಸೈಲ್, ಮಾಜಿ ಶಾಸಕಿ ರೂಪಾಲಿ ನಾಯ್ಕ ಸೇರಿದಂತೆ ಹಲವಾರು ಗಣ್ಯರು ಕಾರವಾರದ ನಾಗರಿಕರು ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ ರೈಲಿಗೆ ಸ್ವಾಗತ ಕೋರಿದರು.

ಈ ವೇಳೆ ರೈಲಿಗೆ ಕೈಮುಗಿದು ಶಾಸಕ ಸತೀಶ ಸೈಲ್ ಒಳಗೆ ಪ್ರವೇಶಿಸಿದರು. ಮಾಜಿ ಶಾಸಕಿ ಮಾಜಿ ಶಾಸಕಿ ರೂಪಾಲಿ ನಾಯ್ಕ ಮತ್ತು ಬಿಜೆಪಿ ಕಾರ್ಯಕರ್ತರು ಪುಷ್ಪವೃಷ್ಠಿ ಸುರಿಸಿದರು. ಪ್ರಯಾಣಿಕರಿಗೆ ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಸಕ ಸತೀಶ ಸೈಲ್ ಮಾತನಾಡಿ ವಂದೇ ಭಾರತ ರೈಲು ಕಾರವಾರ ಭಾಗದಲ್ಲಿ ಓಡಾಟ ಆರಂಭಿಸಿದ್ದು ಸಂತಸದ ಸಂಗತಿ ಎಂದರು.

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

ಮಾಜಿ ಶಾಸಕಿ ರೂಪಾಲಿ ನಾಯ್ಕ ಮಾತನಾಡಿ ಕರಾವಳಿ ಭಾಗದ ಜನರ ಬಹುಕಾಲದ ಕನಸು ನನಸಾಗಿದ್ದು ಪ್ರಧಾನಿ ನರೇಂದ್ರ ಮೋದಿ, ರೈಲ್ವೆ ಸಚಿವರು ಮತ್ತು ಸಂಸದರಿಗೆ ಧನ್ಯವಾದಗಳನ್ನು ಸಲ್ಲಿಸುವುದಾಗಿ ತಿಳಿಸಿದರು. ಕಾರವಾರ ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಶಾಸಕ ಸತೀಶ ಸೈಲ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ವಂದೇ ಭಾರತ ಕಾರವಾರದಿಂದ ಮಡಗಾಂವಗೆ ಪ್ರಯಾಣ ಬೆಳೆಸಿತು.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement