ಹೊಸ ವರ್ಷದ ಪಾರ್ಟಿ ವೇಳೆ ಇಬ್ಬರ ನಡುವೆ ಗಲಾಟೆ ; ಒಬ್ಬನ ಮೂಗು ಕಚ್ಚಿ ತುಂಡರಿಸಿದ ಮತ್ತೊಬ್ಬ…!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಪಿಲ್ಯದಲ್ಲಿ ಭಾನುವಾರ ರಾತ್ರಿ ಹೊಸ ವರ್ಷಾಚರಣೆ ವೇಳೆ ಇಬ್ಬರು ಯುವಕರ ನಡುವೆ ಜಗಳ ನಡೆದಿದ್ದು, ಈ ವೇಳೆ ಯುವಕನೊಬ್ಬನ ಮೂಗನ್ನು ಮತ್ತೊಬ್ಬ ಕಚ್ಚಿ ತುಂಡರಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ.
‘ಪಿಲ್ಯ ಗ್ರಾಮದ ಉಲ್ಪೆ ಬಳಿಯ ನಿವಾಸಿ ದೀಕ್ಷಿತ್ (28) ಮೂಗಿಗೆ ಗಾಯವಾಗಿದೆ. ಆತನ ಗೆಳೆಯ, ಮೂಡಿಗೆರೆ ತಾಲೂಕಿನ ರಾಕೇಶ ಎಂಬಾತ ಮೂಗು ಕಚ್ಚಿ ಗಾಯಗೊಳಿಸಿದ ಆರೋಪಿ ಎಂದು ಹೇಳಲಾಗಿದೆ. ಆರೋಪಿಯು ಪಿಲ್ಯ ಗ್ರಾಮದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸಂಬಂಧಿಕರ ಮನೆಯಲ್ಲಿ ವಾಸವಿದ್ದಾನೆ ಎನ್ನಲಾಗಿದೆ.

ಕೆಲವು ಯುವಕರು ಸೇರಿ ಅಳದಂಗಡಿಯಲ್ಲಿ ಹೊಸ ವರ್ಷಾಚರಣೆ ನಡೆಸಿದ್ದರು. ಬಳಿಕ ವೈನ್‌ಶಾಪ್‌ ಒಂದರಲ್ಲಿ ಮದ್ಯಪಾನ ಮಾಡಿದ್ದರು. ಅಲ್ಲಿಂದ ಮನೆಗೆ ಮರಳುವಾಗ ದೀಕ್ಷಿತ್ ಮತ್ತು ರಾಕೇಶ್‌ ನಡುವೆ ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದಿತ್ತು. ಇದು ವಿಕೋಪಕ್ಕೆ ತಿರುಗಿ, ರಾಕೇಶ ಎಂಬಾತ ಸಿಟ್ಟಿನಿಂದ ದೀಕ್ಷಿತ್ ಮೂಗನ್ನು ಕಚ್ಚಿ ತುಂಡರಿಸಿದ್ದ. ಗಾಯಗೊಂಡ ದೀಕ್ಷಿತ್ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದ. ಬಳಿಕ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೀತಿಯೇ ಸಿದ್ದು, ಪರಮೇಶ್ವರ ವೀಡಿಯೊ ಹೊರಬರಬಹುದು : ರಮೇಶ ಜಾರಕಿಹೊಳಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement