ಬೆಳಗಾವಿ : ಮಕ್ಕಳು ಹೂ ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿದ ಮನೆ ಮಾಲೀಕ…!

ಬೆಳಗಾವಿ : ಅಂಗನವಾಡಿ ಮಕ್ಕಳು ಪಕ್ಕದ ಮನೆಯ ಹೂವು ಕಿತ್ತಿದ್ದಾರೆ ಎಂಬ ಕಾರಣಕ್ಕೆ ಸಹಾಯಕಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಅವರ ಮೂಗನ್ನು ಕತ್ತರಿಸಿದ ಘಟನೆ ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಅಂಗನವಾಡಿ ಸಹಾಯಕಿ ಸುಗಂಧಾ ಮೋರೆ (50) ಎಂಬವರ ಮೇಲೆ ಹಲ್ಲೆ ನಡೆಸಿ ಮೂಗು ಕತ್ತರಿಸಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಅಂಗನವಾಡಿ ಮಕ್ಕಳು ಪಕ್ಕದ ಮನೆಯ ಆವರಣದಲ್ಲಿ ಬೆಳೆದಿದ್ದ ಮಲ್ಲಿಗೆ ಹೂ ಕಿತ್ತಿದ್ದಾರೆ ಎಂಬ ಕ್ಷುಲಕ ಕಾರಣಕ್ಕೆ ಅಂಗನವಾಡಿ ಸಹಾಯಕಿಗೆ ಅವಾಚ್ಯವಾಗಿ ನಿಂದಿಸಿದ ಮನೆ ಮಾಲೀಕ ಕಲ್ಯಾಣಿ ಮೋರೆ ಎಂಬಾತ ಕುಡುಗೋಲಿನಿಂದ ಹಲ್ಲೆ ನಡೆಸಿ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿದ್ದಾನೆ.

ಅಂಗನವಾಡಿ ಮಕ್ಕಳು ಅಂಗನವಾಡಿ ಪಕ್ಕದಲ್ಲಿದ್ದ ಕಲ್ಯಾಣಿ ಮೋರೆಯವರ ಮನೆಯ ಆವರಣದಲ್ಲಿ ಬೆಳೆದಿದ್ದ ಮಲ್ಲಿಗೆ ಹೂ ಕಿತ್ತಿದ್ದರು. ಇದರಿಂದ ಕೋಪಗೊಂಡ ಮನೆಮಾಲೀಕ ಈ ಕೃತ್ಯ ಎಸಗಿದ್ದಾನೆ. ಕುಡುಗೋಲು ಹಿಡಿದು ಮಕ್ಕಳನ್ನು ಹೊಡೆಯಲು ಬಂದ ಕಲ್ಯಾಣಿ ಮೋರೆಯನ್ನು ಸುಗಂಧಾ ಅವರು ತಡೆದರು. ಇದರಿಂದ ಸಿಟ್ಟಿಗೆದ್ದ ಆತ ಸುಗಂಧಾ ಮೇಲೆ ಕುಡಗೋಲು ಬೀಸಿದ್ದಾನೆ. ತೀವ್ರವಾಗಿ ಗಾಯಗೊಂಡ ಸುಗಂಧಾ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಮೂಗು ಕತ್ತಿರಿಸಲ್ಪಟ್ಟಾಗ ಸುರಿದ ರಕ್ತ ಶ್ವಾಸಕೋಶಕ್ಕೆ ಹೋಗಿದ್ದರಿಂದ ಉಸಿರಾಟದ ತೊಂದರೆಯಾಗಿದೆ ಎನ್ನಲಾಗಿದೆ. ಜನವರಿ1 ರಂದೇ ಈ ಘಟನೆ ನಡೆದಿದೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ದಾಂಡೇಲಿ : ಗಂಡ ಹೆಂಡತಿಯ ಜಗಳ ; ಕೋಪದಲ್ಲಿ ಮಗುವನ್ನೇ ಮೊಸಳೆಗಳಿರುವ ನಾಲೆಗೆ ಎಸೆದ ತಾಯಿ

ಮೂಗ ಗಂಡನೊಂದಿಗೆ ಅಂಗನವಾಡಿ ಸಹಾಯಕಿ ಜೀವನ ಕಟ್ಟಿಕೊಂಡಿದ್ದರು. ಈಗ ಮತ್ತಷ್ಟು ತೊಂದರೆಗೆ ಸಿಲುಕಿರುವ ಅವರು, ಮೂಗು ಕಟ್ ಆದ ನಂತರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ, ಇದುವರೆಗೆ ಆರೋಪಿ ಕಲ್ಯಾಣಿಯನ್ನು ಪೊಲೀಸರು ಬಂಧಿಸಿಲ್ಲ.
ಬೆಳಗಾವಿ (Belagavi) ಜಿಲ್ಲೆಯಲ್ಲೇ ಮೇಲಿಂದ ಮೇಲೆ ಮಹಿಳೆ ಮೇಲೆ ದೌರ್ಜನ್ಯ ನಡೆಯುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿದೆ. ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ‌ ಬೆಳಕಿಗೆ ಬಂದಿದೆ.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement