ಹುಬ್ಬಳ್ಳಿ: ಬಿಜೆಪಿ ಪ್ರತಿಭಟನೆ, ಠಾಣೆಗೆ ನುಗ್ಗಲು ಯತ್ನ: ಆರ್.ಅಶೋಕ ಸೇರಿ ಹಲವರು ವಶಕ್ಕೆ

ಹುಬ್ಬಳ್ಳಿ: ರಾಮಜನ್ಮಭೂಮಿ ಹೋರಾಟಗಾರರ ಬಂಧನ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಯು ಹುಬ್ಬಳ್ಳಿಯಲ್ಲಿ ತೀವ್ರಗೊಂಡಿದೆ. ಹಿಂದೂ ಕಾರ್ಯಕರ್ತನ ಬಂಧನ ಖಂಡಿಸಿ ವಿಪಕ್ಷ ನಾಯಕ ಆರ್‌.ಅಶೋಕ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರು ಪೋಲಿಸ್ ಠಾಣೆಗೆ ನುಗ್ಗಲು ಯತ್ನಿಸಿದಾಗ ತಡೆದ ಪೊಲೀಸರು, ನಾಯಕ ಆರ್. ಅಶೋಕ್ ಸೇರಿದಂತೆ 90 ಜನರನ್ನು ವಶಕ್ಕೆ ಪಡೆದರು.
ಹಿಂದೂ ಕಾರ್ಯಕರ್ತ ಹಾಗೂ ಅಯೋಧ್ಯೆ ಕರಸೇವಕ ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ ಇಲ್ಲಿನ ಶಹರ ಪೊಲೀಸ್ ಠಾಣೆ ಎದರು ಪ್ರತಿಭಟನೆ ನಡೆಯಿತು. ಪ್ರತಿಭಟನೆ ಕೊನೆಯಲ್ಲಿ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಠಾಣೆಗೆ ಮುತ್ತಿಗೆ ಹಾಕಲು ಒಳ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನ ಕಾಯಿ, ಎಂ.ಆರ್ .ಪಾಟೀಲ, ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ ಸೇರಿದಂತೆ ಸುಮಾರು 90ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದರು. ನಂತರ ಅಲ್ಲಿಂದ ಹೊಸ ಸಿ .ಆರ್. ಮೈದಾನಕ್ಕೆ ಕರೆದೊಯ್ದು ನಂತರ ಬಿಡುಗಡೆ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

ಪ್ರತಿಭಟನೆ ವೇಳೆ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ ಅವರು, ಹಿಂದು-ಮುಸ್ಲಿಮರ ಮಧ್ಯೆ ಸಿದ್ದರಾಮಯ್ಯ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಮೇಲೆ ಎಷ್ಟು ಕೇಸ್ ಇವೆ. ಜೈಲು ಶಿಕ್ಷೆ ಆಗಿದೆ. ಅಮ್ಮ, ಮಗ ಬೇಲ್ ಮೇಲಿದ್ದಾರೆ. ಹೀಗಿದ್ದಾಗ ಹಳೇ ಪ್ರಕರಣ ಮತ್ತೆ ಓಪನ್‌ ಮಾಡಿ ಕರಸೇವಕರನ್ನು ಬಂಧಿಸುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಸುಮಾರು 60 ಸಾವಿರಕ್ಕೂ ಹೆಚ್ಚು ದೀರ್ಘಾವಧಿ ಪ್ರಕರಣಗಳು ಬಾಕಿ ಇವೆ. ಅವೆಲ್ಲವನ್ನು ಬಿಟ್ಟು ಕರಸೇವಕನನ್ನು ಬಂಧಿಸಿರುವುದರ ಹಿಂದಿನ ಕುತಂತ್ರ ಏನು ಎಂಬುದು ಜನರಿಗೆ ತಿಳಿದಿದೆ. ರಾಮನನ್ನು ಕೆಣಕಿದರೆ ಆಂಜನೇಯ ಬಿಡಲ್ಲ. ನಿಮ್ಮ ಸರ್ಕಾರ ಬಹಳ ದಿನ ಉಳಿಯುವುದಿಲ್ಲ, 100 ಸಿದ್ದರಾಮಯ್ಯ ಬಂದರೂ ಎದುರಿಸುವ ಶಕ್ತಿ ನಮಗಿದೆ. ನಾವು ಮುಸ್ಲಿಮರ ವಿರೋಧಿಗಳಲ್ಲ ನಾವು. ಅಬ್ದುಲ್ ಕಲಾಂ, ಶಿಶುನಾಳ ಶರೀಫರನ್ನ ಆರಾಧನೆ ಮಾಡಿದ್ದೇವೆ. ಟಿಪ್ಪು ಮತಾಂಧ. ಆತನನ್ನು ವೈಭವೀಕರಣ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಸರ್ಕಾರ ಹಿಂದು ವಿರೋಧಿಯಾಗಿದೆ. ಕರ್ನಾಟಕದಲ್ಲಿ ರಾಮನ ಜಪ ಮಾಡಿದ್ದೇವೆ. ಇದರಲ್ಲಿ ತಪ್ಪೇನಿದೆ. ನಾವೇನು ಪಾಕಿಸ್ತಾನದಲ್ಲಿ ಇದ್ದೇವೆಯೇ ಎಂದು ಪ್ರಶ್ನಿಸಿದರು.
ಬೃಹತ್ ಪ್ರತಿಭಟನೆಯಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ, ಶಾಸಕರಾದ ಎಂ.ಆರ್. ಪಾಟೀಲ, ಮಹೇಶ ಟೆಂಗಿನಕಾಯಿ, ಪ್ರದೀಪ ಶೆಟ್ಟರ, ಬಿಜೆಪಿ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಬಂಧಿತ ಶ್ರೀಕಾಂತ ಪೂಜಾರಿಯನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.

ಪ್ರಮುಖ ಸುದ್ದಿ :-   ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ 3 ದಿನ ಜೋರಾದ ಗಾಳಿ ಮಳೆಯ ಮುನ್ಸೂಚನೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement