ಬೆಳಗಾವಿ : ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿದ ಆರೋಪಿ ಬಂಧನ

ಬೆಳಗಾವಿ : ಕುಡುಗೋಲಿನಿಂದ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿ ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯ ಬಸುರ್ತೆ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಅಂಗನವಾಡಿ ಮಕ್ಕಳು ತನ್ನ ಮನೆಯ ಹೂವುಗಳನ್ನು ಕಿತ್ತಿದ್ದಾರೆಂದು ಕೋಪಗೊಂಡ ಮನೆಯ ಮಾಲೀಕ ಕಲ್ಯಾಣಿ ಜ್ಯೋತಿಬಾ ಮೋರೆ ಎಂಬಾತ ಜಗಳ ತೆಗೆದು ಕುಡುಗೋಲಿನಿಂದ ಹಲ್ಲೆ ನಡೆಸಿ ಅಂಗನವಾಡಿ ಶಿಕ್ಷಕಿ ಮೀರಾ ಮೋರೆ ಅವರ ಮೂಗು ಕತ್ತರಿಸಿದ್ದ.
ಮೂರು ದಿನಗಳಿಂದ ಗ್ರಾಮದ ಹೊರವಲಯದಲ್ಲಿ ಅಡಗಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಅವರ ವಿರುದ್ಧ ಐಪಿಸಿ ಸೆಕ್ಷನ್‌ 326 ಅಡಿ (ಮಾರಣಾಂತಿಕ ಹಲ್ಲೆ ಮಾಡಿ ಭಾರೀ ಗಾಯ) ಪ್ರಕರಣ ದಾಖಲಿಸಲಾಗಿದೆ

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ, ಸುಳ್ಳು ಪ್ರಕರಣ ದಾಖಲು : ಬಂಧನದ ನಂತರ ರೇವಣ್ಣ ಮೊದಲ ಪ್ರತಿಕ್ರಿಯೆ

ನಿಮ್ಮ ಕಾಮೆಂಟ್ ಬರೆಯಿರಿ

advertisement