ʼಯುವನಿಧಿ ಯೋಜನೆʼಗೆ ಈವರಗೆ 32 ಸಾವಿರ ಅರ್ಜಿ ಸಲ್ಲಿಕೆ : ಬೆಳಗಾವಿ, ಬೆಂಗಳೂರಲ್ಲಿ ಹೆಚ್ಚು

ಬೆಂಗಳೂರು : ಕರ್ನಾಟಕ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ನಿರುದ್ಯೋಗಿ ಪದವೀಧರರು ಹಾಗೂ ಡಿಪ್ಲೊಮಾ ಪಾಸಾದವರಿಗೆ ಭತ್ಯೆ ನೀಡುವ “ಯುವನಿಧಿ ಯೋಜನೆ” ಚಾಲನೆ ಸಿಕ್ಕಿದ್ದು, ಅರ್ಜಿಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿವೆ. ಆರಂಭವಾದ ಸುಮಾರು 10 ದಿನಗಳಲ್ಲಿ ಈವರೆಗೆ ಒಟ್ಟು 32,184 ಪದವೀಧರರು ಅರ್ಜಿ ಸಲ್ಲಿಸಿದ್ದಾರೆ. ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಜನವರಿ 12ರಂದು ಶಿವಮೊಗ್ಗದಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಭತ್ಯೆ ಜಮಾ ಮಾಡುವುದಕ್ಕೆ ಚಾಲನೆ ನೀಡಲಾಗುತ್ತದೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಂಚಿಕೊಂಡಿರುವ ಅಂಕಿಅಂಶಗಳ ಪ್ರಕಾರ, ಬೆಳಗಾವಿ ಮತ್ತು ಬೆಂಗಳೂರು ನಗರ ಜಿಲ್ಲೆಗಳು ಅತಿ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ.

ಬೆಳಗಾವಿಯಲ್ಲಿ 3,900 ಅರ್ಜಿಗಳು ಸಲ್ಲಿಕೆಯಾಗಿದ್ದು, ಬೆಂಗಳೂರು ನಗರದಲ್ಲಿ 2,853 ಅರ್ಜಿಗಳು ಸಲ್ಲಿಕೆಯಾಗಿವೆ. ಮೂರನೇ ಅತಿ ಹೆಚ್ಚು ಅರ್ಜಿ ಸಲ್ಲಿಕೆ ಬಾಗಲಕೋಟೆ 1,943, ನಂತರದ ಸ್ಥಾನದಲ್ಲಿ ವಿಜಯಪುರ 1,741 ಮತ್ತು ರಾಯಚೂರು 1,714 ಜಿಲ್ಲೆಗಳಿವೆ. ಉಡುಪಿ 236, ಕೊಡಗು 120, ಚಾಮರಾಜನಗರ 237 ಮತ್ತು ರಾಮನಗರ ಜಿಲ್ಲೆಯಲ್ಲಿ 329 ಅರ್ಜಿಗಳು ಸಲ್ಲಿಕೆಯಾಗಿವೆ.
ರಾಜ್ಯ ಸರ್ಕಾರವು ಸುಮಾರು 5 ಲಕ್ಷ ಅಭ್ಯರ್ಥಿಗಳು ಯುವನಿಧಿ ಪ್ರೋತ್ಸಾಹಧನದ ಸದುಪಯೋಗ ಪಡೆಯುತ್ತಾರೆ ಎಂದು ಮಾಹಿತಿ ನೀಡಿತ್ತು. ಯುವನಿಧಿಗೆ ಅರ್ಜಿ ಸಲ್ಲಿಸಿದ ದಿನಾಂಕದಿಂದ ಉದ್ಯೋಗ ಪಡೆಯುವವರೆಗೆ ಮಾತ್ರ ಅಥವಾ 2 ವರ್ಷ ಗರಿಷ್ಠ ಅವಧಿಯ ವರೆಗೆ ಮಾತ್ರ ಈ ಸೌಲಭ್ಯ ನೀಡಲಾಗುತ್ತದೆ. ಈವರೆಗೆ ಶೇ 6%ರಷ್ಟು ಅರ್ಹ ಫಲಾನುಭವಿಗಳು ಮಾತ್ರ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಮುಖ ಸುದ್ದಿ :-   ಪ್ರಧಾನಿಯವರು ಪತ್ರಿಕಾಗೋಷ್ಠಿಗಳನ್ನು ಏಕೆ ನಡೆಸುವುದಿಲ್ಲ? : ಹೆಚ್ಚು ಸಲ ಕೇಳಿದ ಪ್ರಶ್ನೆಗೆ ಕೊನೆಗೂ ಉತ್ತರಿಸಿದ ನರೇಂದ್ರ ಮೋದಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement