ತುಮಕೂರು: ಕಾರು ಹಾಗೂ ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕಿನಲ್ಲಿದ್ದ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಜೋಡಗಟ್ಟೆ ಬಳಿ ಶನಿವಾರ ನಡೆದಿದೆ.
ಮೃತರನ್ನು ತಿಪಟೂರು ಮೂಲದ ಅನಿಲಕುಮಾರ (21), ನರಸಿಂಹ ಮೂರ್ತಿ (21), ಕಾವ್ಯ (19) ಎಂದು ಗುರುತಿಸಲಾಗಿದೆ. ಮೂವರು ಆದಿಚುಂಚನಗಿರಿ ಮಠಕ್ಕೆ ತೆರಳಿ ಸ್ಕೂಟರ್ನಲ್ಲಿ ವಾಪಸ್ ಮನೆಗೆ ಬರುತ್ತಿದ್ದಾಗ ಜೋಡಗಟ್ಟೆ ಬಳಿ ಸ್ಕೂಟರ್-ಕಾರು ಮುಖಾಮುಖಿ ಡಿಕ್ಕಿಯಾಗಿವೆ ಈ ದುರ್ಘಟನೆ ನಡೆದಿದೆ. ಇಬ್ಬರು ಯುವಕರು ಸ್ಥಳದಲ್ಲೇ ಸಾವಿಗೀಡಾದರೆ ಯುವತಿ ಅಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾಳೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ತುರುವೇಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ