ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕೋಮುಗಲಭೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಪುನೀತ ಕೆರೆಹಳ್ಳಿ ವಿರುದ್ಧ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದಿಂದ ಸೈಬರ್ ಕ್ರೈಂಗೆ ದೂರು ನೀಡಲಾಗಿದೆ.
ರಾಷ್ಟ್ರ ರಕ್ಷಣಾ ಪಡೆ ವಾಟ್ಸಾಪ್ ಗ್ರೂಪ್ನಲ್ಲಿ ಸಂದೇಶ ರವಾನಿಸುವ ಮೂಲಕ ಕೋಮುಗಲಭೆ ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪುನೀತ್ ಕೆರೆಹಳ್ಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದೂರು ದಾಖಲಿಸಿದೆ.
ರಾಷ್ಟ್ರ ರಕ್ಷಣಾ ಪಡೆ ವಾಟ್ಸಾಪ್ ಗ್ರೂಪ್ನಲ್ಲಿ ಸಂದೇಶವೊಂದು ಹರಿದಾಡುತ್ತಿದ್ದು, ಕರ್ನಾಟಕದಲ್ಲಿ ಕೋಮುಗಲಭೆ ಎಬ್ಬಿಸಲು ಬಿಜೆಪಿ ಬೆಂಬಲ ಕೊಟ್ಟಿದೆ. ಆದುದರಿಂದ ಎಲ್ಲಾ ಕಾರ್ಯಕರ್ತರು ರೆಡಿಯಾಗಿ ಇರಿ. ಎಲ್ಲಿ ಏನು ಮಾಡಬೇಕೆಂದು ಈ ಗ್ರೂಪಿನ ಮೂಲಕ ಮಾಹಿತಿ ಕೊಡುತ್ತೇವೆ. ಜೈ ರಾಷ್ಟ್ರ ರಕ್ಷಣಾ ಪಡೆ 2024ಕ್ಕೆ ಮತ್ತೊಮ್ಮೆ ಮೋದಿ ಎಂಬ ಸಂದೇಶ ಹಾಕಿ ಕೋಮುಗಲಭೆಗೆ ಯತ್ನ ನಡೆಸುತ್ತಿದೆ ಎಂದು ಕಾಂಗ್ರೆಸ್ ದೂರು ನೀಡಿದೆ.
ವಾಟ್ಸಾಪ್ ಗ್ರೂಪ್ನಲ್ಲಿ ಸಂದೇಶ ಹಾಕಿರುವ ನಂಬರ್ ಅನ್ನು ಟ್ರೂ ಕಾಲರ್ನಲ್ಲಿ ಚೆಕ್ ಮಾಡಿದಾಗ ಪುನೀತ್ ಕೆರೆಹಳ್ಳಿ ನಂಬರ್ ಎಂದ ತಿಳಿದು ಬಂದಿದೆ. ದ್ವೇಷ ಸೃಷ್ಟಿಸುವ ಈತನನ್ನ ಬಂಧಿಸಬೇಕು. ಯಾವ ಬಿಜೆಪಿ ಮುಖಂಡ ಈತನಿಗೆ ಸುಪಾರಿ ಕೊಟ್ಟಿದ್ದಾನೆಂದು ತನಿಖೆ ಆಗಬೇಕು ಎಂದು ಕಾಂಗ್ರೆಸ್ ದೂರು ನೀಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ