ಮಂಗಳೂರು : ಬಂಟ್ವಾಳ ಶಾಸಕರಿಗೆ ಕಾರು ಡಿಕ್ಕಿ

ಮಂಗಳೂರು : ಬಂಟ್ವಾಳ ಶಾಸಕ ರಾಜೇಶ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಕಾರು ಡಿಕ್ಕಿಯಾದ ಘಟನೆ ನಡೆದ ಘಟನೆ ಭಾನುವಾರ ಮಧ್ಯಾಹ್ನದ ಸುಮಾರಿಗೆ ಮಂಗಳೂರು ಹೊರವಲಯದ ತೆಂಕ ಎಡಪದವು ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದ್ದು, ಶಾಸಕರು ಅಪಾಯದಿಂದ ಪಾರಾಗಿದ್ದಾರೆ.
ಶಾಸಕ ರಾಜೇಶ ನಾಯ್ಕ್ ಅವರು ಸಂಕ್ರಮಣದ ಅಂಗವಾಗಿ ಎಡಪದವು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪೂಜೆ ಮುಗಿಸಿ ವಾಪಸ್‌ ತನ್ನ ಕಾರಿನತ್ತ ಬರುತ್ತಿರುವ ವೇಳೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ಮೂಡಬಿದಿರೆ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರೊಂದು ಶಾಸಕರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ, ಕಾರು ಗುದ್ದಿದ ರಭಸಕ್ಕೆ ಶಾಸಕರು ಬಿದ್ದು ಗಾಯವಾಗಿದ್ದು, ಕೂಡಲೇ ಮಂಗಳೂರು ಎ.ಜೆ.ಆಸ್ಪತ್ರೆಗೆ ದಾಖಲಿಸಲಾಯಿತು. ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಶಾಸಕರು ಪಾರಾಗಿದ್ದಾರೆ. ಇದೀಗ ಚಿಕಿತ್ಸೆ ಪಡೆದುಕೊಂಡು ಶಾಸಕರು ಮನೆಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಡಿಕ್ಕಿ ಹೊಡೆದು ಪರಾರಿಯಾದ ಕಾರನ್ನು ಸ್ಥಳೀಯರು ಗುರುಪುರದಲ್ಲಿ ಹಿಡಿದು ಚಾಲಕ ಸಹಿತ ಕಾರನ್ನು ಬಜ್ಪೆ ಪೋಲೀಸರಿಗೆ ಒಪ್ಪಿಸಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement