ಪಂಚರ್ ಹಾಕುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ : ಸ್ಥಳದಲ್ಲೇ ಇಬ್ಬರು ಸಾವು

ತುಮಕೂರು : ಪಂಚರ್ ಆಗಿದ್ದ ಕಾರನ್ನು ದುರಸ್ತಿ ಮಾಡುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-4ರ ಕುಂಟೇಗೌಡನಹಳ್ಳಿ ಗೇಟ್ ಬಳಿ ನಡೆದಿದೆ ಎಂದು ವರದಿಯಾಗಿದೆ.
ಮೃತರನ್ನು ಬೆಂಗಳೂರಿನ ಆವಲಹಳ್ಳಿ ನಿವಾಸಿಗಳಾದ ಮಹೇಶ್(40) ಮತ್ತು ವಕೀಲರ ಸಹಕಾರ ಬ್ಯಾಂಕ್ ಉದ್ಯೋಗಿ ಉಮೇಶ(40) ಎಂದು ಗುರುತಿಸಲಾಗಿದೆ. ಮಹೇಶ ಹಾಗೂ ಉಮೇಶ ಅವರು ಬೆಂಗಳೂರಿನಿಂದ ತಮ್ಮ ಹುಂಡೈ ಐ 10 ಕಾರಿನಲ್ಲಿ ಹರಿಹರಕ್ಕೆ ಹೋಗುತ್ತಿದ್ದಾಗ ಮಧ್ಯರಾತ್ರಿ 12:30ರ ವೇಳೆ ಶಿರಾ ಕಡೆಗೆ ಬರುವಾಗ ಕಾರಿನ ಟೈರ್ ಪಂಕ್ಚರ್‌ ಆಗಿದೆ.
ಕಾರನ್ನು ರಸ್ತೆ ಪಕ್ಕ ನಿಲ್ಲಿಸಿ ಪಂಕ್ಚರ್‌ ಹಾಕುತ್ತಿರುವಾಗ ಅಪರಿಚಿತ ವಾಹನ ಅವರಿಗೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃಥಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತವೆಸಗಿ ಪರಾರಿಯಾಗಿರುವ ವಾಹನ ಚಾಲಕನ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement