ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ‘ಪೂಜಿಸಲೆಂದೇ ಹೂಗಳ ತಂದೆ’ ಎಂಬ ಕನ್ನಡದ ಜನಪ್ರಿಯ ಹಾಡಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರು ಶಿವಶ್ರೀ ಸ್ಕಂದ ಪ್ರಸಾದ ಎಂಬ ಯುವ ಗಾಯಕಿ ಹಾಡಿರುವ ಹಾಡಿನ ಯೂಟ್ಯೂಬ್ ಲಿಂಕ್ ಪೋಸ್ಟ್ ಅನ್ನು ಪ್ರಧಾನಿ ಮೋದಿ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ.
ಕನ್ನಡದಲ್ಲಿ ಶಿವಶ್ರೀ ಸ್ಕಂದಪ್ರಸಾದ ಅವರ ಈ ಗಾಯನವು ಪ್ರಭು ಶ್ರೀ ರಾಮನ ಬಗೆಗಿನ ಭಕ್ತಿಯನ್ನು ಎತ್ತಿ ತೋರಿಸುತ್ತದೆ. ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುತ್ತವೆ. ಜೈಶ್ರೀರಾಮ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಅವರು ಟ್ವೀಟ್ ಮಾಡಿದ ನಂತರ ಇದು ವೈರಲ್ ಆಗಿದೆ.
ರಾಜಕುಮಾರ ಸಿನಿಮಾದ ಹಾಡು
‘ಪೂಜಿಸಲೆಂದೇ ಹೂಗಳ ತಂದೆ’ ಹಾಡು ಮೂಲತಃ ಕನ್ನಡದ ವರ ನಟ ಡಾ.ರಾಜಕುಮಾರ ನಟನೆಯ ‘ಎರಡು ಕನಸು’ ಸಿನಿಮಾದ ಹಾಡು. ಸಿನಿಮಾ 1974 ರಲ್ಲಿ ಈ ಸಿನಿಮಾವನ್ನು ದೊರೈ-ಭಗವಾನ್ ಜೋಡಿ ಈ ಸಿನಿಮಾ ನಿರ್ದೇಶಿಸಿದ್ದರು. ಚಿ. ಉದಯಶಂಕರ ಅವರು ಗೀತೆಯನ್ನು ಬರೆದಿದ್ದಾರೆ, ರಾಜನ್-ನಾಗೇಂದ್ರ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಖ್ಯಾತ ಹಿನ್ನೆಲೆ ಗಾಯಕಿ ಎಸ್ ಜಾನಕಿ ಅವರು ಹಾಡಿದ್ದಾರೆ. ಇದನ್ನು ಯುವ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ ಅವರು ಹಾಡಿ ಯೂಟ್ಯೂಬ್ನಲ್ಲಿ ಪ್ರಕಟಿಸಿದ್ದರು.
ಶಿವಶ್ರೀ ಸ್ಕಂದ ಪ್ರಸಾದ ಸಂತಸ
ತಾವು ಹಾಡಿರುವ ವೀಡಿಯೊವನ್ನು ಪ್ರಧಾನಿ ಮೋದಿ ಮೆಚ್ಚಿ ಪೋಸ್ಟ್ ಮಾಡಿರುವುದಕ್ಕೆ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ ಸಂತಸ ವ್ಯಕ್ತಪಡಿಸಿದ್ದಾರೆ. ಇದು ನನಗೆ ತುಂಬಾ ಸಂತೋಷದ ಕ್ಷಣ. ನಾನು ಈಗ ಅನುಭವಿಸುತ್ತಿರುವ ಭಾವನೆಯನ್ನು ವಿವರಿಸಲು ನನಗೆ ಪದಗಳಿಲ್ಲ. ಇದು ಒಂದು ರೋಮಾಂಚಕ ಕ್ಷಣ. ಇದು ಭಗವಾನ್ ರಾಮನಿಂದ ಬಂದ ಆಶೀರ್ವಾದ ಎಂದು ಅವರು ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ