ಬಾಬರ್ ರಸ್ತೆ ನಾಮಫಲಕ ಅಳಿಸಿ ಅಯೋಧ್ಯಾ ಮಾರ್ಗ ಎಂಬ ಪೋಸ್ಟರ್ ಅಂಟಿಸಿದ ಹಿಂದೂ ಸೇನಾ ಕಾರ್ಯಕರ್ತರು…

ನವದೆಹಲಿ : ದೆಹಲಿಯಲ್ಲಿರುವ ಬಾಬರ್ ರಸ್ತೆಯ ನಾಮಫಲಕಗಳ ಮೇಲೆ ‘ಅಯೋಧ್ಯಾ ಮಾರ್ಗ’ ಎಂಬ ಪೋಸ್ಟರ್‌ಗಳನ್ನು ಹಿಂದೂ ಸೇನಾ ಕಾರ್ಯಕರ್ತರು ಅಂಟಿಸಿರುವುದು ಬೆಳಕಿಗೆ ಬಂದಿದೆ.
ಬಾಬರ್ ರಸ್ತೆಯ ಹೆಸರನ್ನು ಅಯೋಧ್ಯಾ ರಸ್ತೆ ಎಂದು ಬದಲಾಯಿಸುವಂತೆ ಹಿಂದೂ ಸೇನಾ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಈಗ ಬಾಬರ್ ರಸ್ತೆಯ ಫಲಕದ ಮೇಲೆ ಅಯೋಧ್ಯಾ ಮಾರ್ಗ ಎಂದು ಪೋಸ್ಟರ್ ಅನ್ನು ಅಂಟಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಹಿಂದೂ ಸೇನಾ ಅಧ್ಯಕ್ಷ ವಿಷ್ಣು ಗುಪ್ತಾ ಅವರು, ಬಾಬರ್ ರಸ್ತೆಯ ಹೆಸರನ್ನು ಬದಲಾಯಿಸಬೇಕೆಂದು ಹಿಂದೂ ಸೇನಾ ಬಹಳ ದಿನಗಳಿಂದ ಒತ್ತಾಯಿಸುತ್ತಿದೆ. ಭಗವಾನ್ ಶ್ರೀರಾಮ, ಶ್ರೀಕೃಷ್ಣ, ಶ್ರೀ ವಾಲ್ಮೀಕಿ, ಗುರು ರವಿದಾಸರಂತಹ ಮಹಾಪುರುಷರ ದೇಶ ಭಾರತ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗುತ್ತಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗುತ್ತಿದೆ. ಅದೇ ರೀತಿ ದೆಹಲಿ ಬಾಬರ್‌ ರಸೆಯ ಹೆಸರೂ ಬದಲಾಯಿಸಬೇಕು ಎಂದು ಒತ್ತಾಯಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement