ಹೆಚ್ಚುವರಿ ವೇತನ ವಾಪಸ್‌ ನೀಡಲು ನೋಟಿಸ್‌ ; ಹಿರೇಮಗಳೂರು ಕಣ್ಣನ್ ತಪ್ಪಿಲ್ಲ, ತಹಸೀಲ್ದಾರರಿಂದ ಹಣ ವಸೂಲಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡದ ಪೂಜಾರಿ ಎಂದೇ ಜನಪ್ರಿಯರಾಗಿರುವ ಸಾಹಿತಿ, ವಾಗ್ಮಿ ಹಾಗೂ ಹಿರೇಮಗಳೂರು ಗ್ರಾಮದ ಕೊಂದಡರಾಮಚಂದ್ರಸ್ವಾಮಿ ದೇವಾಲಯದ ಅರ್ಚಕರಾದ ಹಿರೇಮಗಳೂರು ಕಣ್ಣನ್‌ ಅವರಿಗೆ ನೀಡಿದ್ದ ಅರ್ಚಕರ ಹಣವನ್ನು ವಾಪಸ್ ಮಾಡುವಂತೆ ನೀಡಿದ್ದ ನೋಟಿಸ್‌ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಯಿಸಿದ್ದಾರೆ. ಹಾಗೂ ಹೆಚ್ಚುವರಿ ಹಣವನ್ನು ತಹಸೀಲ್ದಾರರಿಂದಲೇ ವಸೂಲಿ ಮಾಡುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಇಂದು ಬುಧವಾರ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಅವರು, ಹಿರೇಮಗಳೂರು ಕಣ್ಣನ್ ಅವರಿಗೆ ತಸ್ತೀಕ್ ಹಣ ವಾಪಸ್‌ ನೀಡುವಂತೆ ನೋಟಿಸ್ ನೀಡಿರುವುದರಲ್ಲಿ ತಹಸೀಲ್ದಾರ್ ತಪ್ಪಿದೆಯೇ ಹೊರತು ಕಣ್ಣನ್ ಅವರ ತಪ್ಪಿಲ್ಲ. ನೋಟಿಸ್ ಅನ್ನು ಹಿಂಪಡೆಯಲು ಸಂಬಂಧಪಟ್ಟವರ ಜತೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.
ಹಿರೇಮಗಳೂರು ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಸೀಲ್ದಾರರು, ಹೀಗಾಗಿ ಅವರಿಂದಲೇ ಬಾಕಿ ಹಣ ಕಟ್ಟಿಸಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ….
ಹಿರೇಮಗಳೂರು ಕಣ್ಣನ್‌ ಅವರು ಹಿರೇಮಗಳೂರು ಗ್ರಾಮದ ಕೊಂದಡರಾಮಚಂದ್ರಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾಗಿದ್ದಾರೆ. ಕಣ್ಣನ್ ಅವರ ಖಾತೆಗೆ ಪ್ರತಿ ತಿಂಗಳು 7,500 ರೂಪಾಯಿ ಸಂಬಳ ಜಮೆಯಾಗುತ್ತಿತ್ತು. ಕಣ್ಣನ್‌ ಅವರಿಗೆ ಹಣ ವಾಪಸ್‌ ಮಾಡುವಂತೆ ನೋಟಿಸ್‌ ನೀಡಲಾಗಿತ್ತು. ದೇವಾಲಯದ ಆದಾಯ ಕಡಿಮೆ ಇದ್ದು, ನಿಮಗೆ ಸಂಬಳ ಹೆಚ್ಚುವರಿಯಾಗಿ ಪಾವತಿ ಆಗಿದೆ. ಹೀಗಾಗಿ 4,500 ರೂಪಾಯಿಯಂತೆ 10 ವರ್ಷದ 4,74,000 ರೂಪಾಯಿ ಹಣವನ್ನು ವಾಪಸ್ ನೀಡಲು ಸೂಚನೆ ನೀಡಲಾಗಿತ್ತು. ವೇತನ ತಡೆಹಿಡಿದ ತಹಸೀಲ್ದಾರರು ನೋಟಿಸ್ ನೀಡಿದ್ದರು ಹಾಗೂ ಕಳೆದ ಡಿಸೆಂಬರ್‌ ತಿಂಗಳಿನಿಂದ ವೇತನ ತಡೆಹಿಡಿಯಲಾಗಿತ್ತು.

ಪ್ರಮುಖ ಸುದ್ದಿ :-   ಬೆಂಗಳೂರಿನ ಹಲವೆಡೆ ಜೋರಾಗಿ ಮಳೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement