ಬಿಜೆಪಿ ನಾವೇ ಕಟ್ಟಿ ಬೆಳೆಸಿದ ಮನೆ…ಈ ಮನೆಗೆ ಸಂತೋಷದಿಂದಲೇ ವಾಪಸ್‌ ಬಂದಿದ್ದೇನೆ :ಶೆಟ್ಟರ

ಬೆಂಗಳೂರು: ದೇಶಕ್ಕೆ ಸುರಕ್ಷತೆ ದೃಷ್ಟಯಿಂದ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಆಶಿಸಿ ಬಿಜೆಪಿಗೆ ಮರಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ಹೇಳಿದ್ದಾರೆ.
ಇಲ್ಲಿನ ವಿಮಾನನಿಲ್ದಾಣದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ನಮ್ಮ ಮನೆ, ನಾವೇ ಕಟ್ಟಿ ಬೆಳೆಸಿದ ಮನೆ. ಆ ಮನೆಗೆ ಸಂತೋಷದಿಂದ ವಾಪಸಾಗಿದ್ದೇನೆ. ರಾಷ್ಟ್ರದ -ರಾಜ್ಯದ ನಾಯಕರು ಗೌರವ ಕೊಟ್ಟಿದ್ದಾರೆ. ಯಾವುದೇ ಕಂಡಿಷನ್ ಹಾಕಿ ನಾನು ಬಿಜೆಪಿ ಸೇರಿಲ್ಲ. ಮುಂದೆ ಪಕ್ಷ ಬಯಸಿದಂತೆ ನಡೆದುಕೊಳ್ಳುತ್ತೇನೆ ಎಂದು ಹೇಳಿದರು.

ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ನಡ್ಡಾ ಅವರನ್ನು ಭೇಟಿ ಮಾಡಿದ್ದೇನೆ. ವಿಜಯೇಂದ್ರ ಬಿಜೆಪಿ ಅಧ್ಯಕ್ಷರಾದ ಬಳಿಕ ಅವರು ಹಾಗೂ ಯಡಿಯೂರಪ್ಪ ಅವರು ಈ ಕುರಿತು ಪ್ರಸ್ತಾಪ ಮುಂದಿಟ್ಟರು. ರಾಜ್ಯದ ಹಲವಾರು ಶಾಸಕರು, ಮಾಜಿ ಶಾಸಕರೂ ಈ ಬಗ್ಗೆ ಪ್ರಸ್ತಾಪಿಸಿದರು.ನಂತರರಾಷ್ಟ್ರೀಯ ನಾಯಕರಿದಲೂ ಉತ್ತಮ ಸ್ಪಂದನೆ ದೊರೆಯಿತು. ಹೀಗಾಗಿ ಬಿಜೆಪಿ ಸೇರಿದ್ದೇನೆ” ಹೇಳಿದರು.
ಎಂದು ” ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಈ ಸಂದರ್ಭದಲ್ಲಿ ಇದ್ದರು.

ಪ್ರಮುಖ ಸುದ್ದಿ :-   ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮೇ 10ರ ವರೆಗೆ ಮಳೆ ಮುನ್ಸೂಚನೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement