ಹೈಕಮಾಂಡ್‌ ಹೇಳಿದಂತೆ ಕೇಳಲು ನಾನೇನು ಫುಟ್‌ಬಾಲ್‌ ಚೆಂಡಾ : ಪ್ರಕಾಶ ಹುಕ್ಕೇರಿ

ಬೆಳಗಾವಿ : ‘ನಾನು ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡುವುದಿಲ್ಲ. ವಿಧಾನ ಪರಿಷತ್ ಸದಸ್ಯನಾಗಿ ಮುಂದುವರೆಯುತ್ತೇನೆ. ಹೈಕಮಾಂಡ್‌ ಹೇಳಿದಂತೆ ಕೇಳಲು ನಾನೇನು ಫುಟ್‌ಬಾಲಾ?’ ಎಂದು ಕಾಂಗ್ರೆಸ್‌ ನಾಯಕ ಪ್ರಕಾಶ ಹುಕ್ಕೇರಿ ಹೇಳಿದ್ದಾರೆ.
ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರು ಗ್ರಾಮದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಹೈಕಮಾಂಡ್‌ ಹೇಳಿದರೂ ಸ್ಪರ್ಧಿಸುವುದಿಲ್ಲ. ಹೈಕಮಾಂಡ್‌ ಹೇಳಿದ ತಕ್ಷಣ ಹೋಗಲು ಇದೇನು ಫುಟ್‌ಬಾಲ್‌ ರಾಜ್ಯವೇ? ವರ್ಷಕ್ಕೊಮ್ಮೆ ಎತ್ತ ಬೇಕಾದತ್ತ ಒದೆಸಿಕೊಳ್ಳಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಹೇಳಿದರೂ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.
‘ಲೋಕಸಭೆಗೆ ಪ್ರಕಾಶ ಹುಕ್ಕೇರಿ ಸ್ಪರ್ಧೆ ಮಾಡುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಅದು ಸತ್ಯಕ್ಕೆ ದೂರ. ನನ್ನನ್ನು ಶಿಕ್ಷಕರು ಆಯ್ಕೆ ಮಾಡಿದ್ದಾರೆ. ಇನ್ನೂ ಐದು ವರ್ಷ ಅವರ ಸೇವೆ ಮಾಡುತ್ತೇನೆ. ಯಾರಿಂದ ಎಷ್ಟೇ ಒತ್ತಡ ಬಂದರೂ ನಾನು ಲೋಕಸಭೆಗೆ ಸ್ಪರ್ಧಿಸುವುದಿಲ್ಲ. ಹೈಕಮಾಂಡ್‌ ನನ್ನ ಮೇಲೆ ಒತ್ತಡ ಹೇರಬಾರದು’ ಎಂದರು.

 

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement