ಉಜಿರೆ : ಬಸ್ಸಿಗಾಗಿ ಕಾಯುತ್ತಿದ್ದವರ ಮೇಲೆ ನುಗ್ಗಿದ ಲಾರಿ ; ಇಬ್ಬರು ಸ್ಥಳದಲ್ಲೇ ಸಾವು

ಬೆಳ್ತಂಗಡಿ: ರಸ್ತೆ ಬದಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದವರಿಗೆ ಲಾರಿಯೊಂದು ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಜಿರೆ ಸಮೀಪ ಭಾನುವಾರ ಮಧ್ಯಾಹ್ನ ನಡೆದಿದೆ ಎಂದು ವರದಿಯಾಗಿದೆ.
ಮೃತರು ಒಬ್ಬರು ಪುರುಷನಾದರೆ ಮತ್ತೊಬ್ಬರು ಮಹಿಳೆಯಾಗಿದ್ದಾರೆ. ಉಜಿರೆ ಸಮೀಪದ ಗಾಂಧಿನಗರ ಕಕ್ಕೆಜಾಲು ನಿವಾಸಿ ಕೃಷ್ಣಪ್ಪ (52), ಕುಂಟಿನಿ ನಿವಾಸಿ ಮೋಹಿನಿ (56) ಮೃತಪಟ್ಟವರು. ಉಜಿರೆ ಸಮೀಪದ ಗಾಂಧಿ ನಗರ ತಿರುವಿನ ಬಳಿ ಇಬ್ಬರು ಬಸ್ಸಿಗಾಗಿ ಕಾಯುತ್ತಿದ್ದಾಗ ಯಮನಂತೆ ಬಂದ ಲಾರಿ ಇಬ್ಬರಿಗೂ ಡಿಕ್ಕಿ ಹೊಡೆದು ನಂತರ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಲಾರಿ ಬಸ್ಸು ಕಾಯುತ್ತಿದ್ದವರ ಮೇಲೆ ನುಗ್ಗಿದ್ದರಿಂದ ಗಂಭೀರ ಗಾಯಗೊಂಡ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ನಂತರ ಲಾರಿ ಸಮೀಪದ ವಿದ್ಯುತ್ ಕಂಬಗಳಿಗೂ ಡಿಕ್ಕಿ ಹೊಡೆದಿದ್ದು, ನಾಲ್ಕು ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ, ಸಮೀಪದ ಕಟ್ಟಡಕ್ಕೂ ಹಾನಿಯುಂಟಾಗಿದೆ. ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement