ನವದೆಹಲಿ: ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಉತ್ತರ ಪ್ರದೇಶ ಎಟಿಎಸ್)ವು ಮಾಸ್ಕೋದ ಭಾರತೀಯ ರಾಯಭಾರ ಕಚೇರಿಯಲ್ಲಿ ನಿಯೋಜನೆಗೊಂಡಿದ್ದ ಪಾಕಿಸ್ತಾನಿ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಏಜೆಂಟ್ನನ್ನು ಬಂಧಿಸಿದೆ.
ಸತ್ಯೇಂದ್ರ ಸಿವಾಲ್ ಎಂಬವರನ್ನು 2021 ರಿಂದ ರಾಯಭಾರ ಕಚೇರಿಯಲ್ಲಿ ಪೋಸ್ಟ್ ಮಾಡಲಾಗಿತ್ತು. ಹಾಪುರ ಮೂಲದ ಆತ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ(ಮಲ್ಟಿ-ಟಾಸ್ಕಿಂಗ್ ಸ್ಟಾಫ್ ( MTS) ಆಗಿ ಕೆಲಸ ಮಾಡುತ್ತಿದ್ದರು. ಅಧಿಕೃತ ಹೇಳಿಕೆಯ ಪ್ರಕಾರ, ಭಯೋತ್ಪಾದನಾ ನಿಗ್ರಹ ದಳವು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಗೂಢಚಾರಿಕೆ ನಡೆಸುತ್ತಿರುವ ಬಗ್ಗೆ ತನ್ನ ಮೂಲಗಳಿಂದ ಸುಳಿವು ಪಡೆದಿದೆ.
ಮಾಹಿತಿಯ ಮೇರೆಗೆ ಉತ್ತರ ಪ್ರದೇಶ ಎಟಿಎಸ್ ಸತ್ಯೇಂದ್ರ ಸಿವಾಲ್ ನನ್ನು ಪ್ರಶ್ನಿಸಿತು, ಆರಂಭದಲ್ಲಿ ಅತೃಪ್ತಿಕರ ಉತ್ತರಗಳನ್ನು ನೀಡಿದರೂ ನಂತರ ಬೇಹುಗಾರಿಕೆಯನ್ನು ಒಪ್ಪಿಕೊಂಡಿದ್ದಾನೆ ಮತ್ತು ಮೀರತ್ನಲ್ಲಿ ಆತನನ್ನು ಬಂಧಿಸಲಾಯಿತು.
ವಿಚಾರಣೆಯ ಸಮಯದಲ್ಲಿ, ಸತ್ಯೇಂದ್ರ ಸಿವಾಲ್ ಭಾರತೀಯ ಸೇನೆ ಮತ್ತು ಅದರ ದೈನಂದಿನ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಹೊರತೆಗೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಹಣದ ಆಮಿಷ ಒಡ್ಡುತ್ತಿದ್ದ ಎಂದು ಬಹಿರಂಗಪಡಿಸಿದ್ದಾನೆ. ಆತ ಭಾರತೀಯ ರಾಯಭಾರ ಕಚೇರಿ, ರಕ್ಷಣಾ ಸಚಿವಾಲಯ ಮತ್ತು ವಿದೇಶಾಂಗ ವ್ಯವಹಾರಗಳ ಬಗ್ಗೆ ನಿರ್ಣಾಯಕ ಮತ್ತು ಗೌಪ್ಯ ಮಾಹಿತಿಯನ್ನು ಐಎಸ್ಐ ಹ್ಯಾಂಡ್ಲರ್ಗಳಿಗೆ ರವಾನಿಸಿದ್ದಾನೆ ಎಂದು ಆರೋಪಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ