ಪೊಲೀಸರ ಮೇಲೆ ಹಲ್ಲೆ ಪ್ರಕರಣ : ಯಲ್ಲಾಪುರ ಮಾಜಿ ಶಾಸಕರ ಪುತ್ರನ ಬಂಧನ

ಕಾರವಾರ : ಪೊಲೀಸರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಮಾಜಿ ಶಾಸಕರೊಬ್ಬರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಕ್ಷೇತ್ರದ ಮಾಜಿ ಶಾಸಕ ವಿ.ಎಸ್. ಪಾಟೀಲ ಅವರ ಪುತ್ರ ಬಾಪು ಗೌಡ ಪಾಟೀಲನನ್ನು ಮುಂಡಗೋಡ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ 2011 ರಲ್ಲಿ ಮುಂಡಗೋಡ ಮುಂಡಗೋಡ ಪೊಲೀಸ್ ಠಾಣೆಯ ಆಗಿನ ಎಎಸ್‌ಐ ಆಗಿದ್ದ ಬಾಲಕೃಷ್ಣ ಪಾಲೇಕರ ಅವರನ್ನು ನಿಂದಿಸಿ ಹಲ್ಲೆ ಮಾಡಿದ ಸಂಬಂಧಿಸಿದ ಪ್ರಕರಣ ಇದಾಗಿದೆ.

ಮುಂಡಗೋಡ ಅರಣ್ಯ ಇಲಾಖೆಯ ಐಬಿಯಲ್ಲಿ 15 ಜನರ ಜತೆ ಸೇರಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಆರೋಪವನ್ನು ಬಾಪುಗೌಡ ಪಾಟೀಲ ಎದುರಿಸುತ್ತಿದ್ದಾನೆ. ನ್ಯಾಯಾಲಯದಲ್ಲಿನ ವಿಚಾರಣೆಗೆ ಕಳೆದ ಆರು ತಿಂಗಳಿಂದ ಹಾಜರಾಗದ ಹಿನ್ನಲೆಯಲ್ಲಿ ನ್ಯಾಯಾಲಯ ಬಾಪುಗೌಡ ಅವರನ್ನು ನ್ಯಾಯಾಲಯಕ್ಕೆ ಹಾಜರ ಪಡಿಸಲು ವಾರೆಂಟ್ ಜಾರಿ ಮಾಡಿತ್ತು. ಪೊಲೀಸರು ಬಾಪುಗೌಡ ಪಾಟೀಲ ಅವರನ್ನು ಬೆಂಗಳೂರನಿಂದ ಬಂಧಿಸಿ ಕರೆ ತಂದು ಶನಿವಾರ ರಾತ್ರಿ ನ್ಯಾಯಾಧೀಶರ ಮುಂದೆ ಹಾಜರ ಪಡಿಸಿದರು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಮುಖ ಸುದ್ದಿ :-   ಗೋಪಾಲಕೃಷ್ಣ ಭಟ್ಟ ನಿಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement