ಮಂಡ್ಯ | ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಕಾರು : ಮೂವರು ಸಾವು

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಹಳ್ಳಕ್ಕೆ ಬಿದ್ದು, ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿ ಹೆಬ್ಬಾಳು ಬಳಿ ಶನಿವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ.
ಕೆ.ಆ‌ರ್.ಪೇಟೆ ನಿವಾಸಿಗಳಾದ ಅನಿಕೇತನ(30), ಪವನ್‌ ಶೆಟ್ಟಿ(32) ಹಾಗೂ ಚಿರಂಜೀವಿ (32) ಘಟನೆಯಲ್ಲಿ ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡಿರುವ ಸಾಗರ ಎಂಬ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಇವರು ಕೆ.ಆರ್.ಪೇಟೆಯಿಂದ ಅಕ್ಕಿಹೆಬ್ಬಾಳು ಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು, ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದಿದೆ.
ತಕ್ಷಣ ಸ್ಥಳೀಯರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರಾದರೂ ಅಷ್ಟರಲ್ಲಾಗಲೇ ಮೂವರು ಮೃತಪಟ್ಟಿದ್ದರು. ಕೆ.ಆ‌ರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement