ಬೆಂಗಳೂರು : ಕೆಪಿಎಸ್ಸಿ ಅಧ್ಯಕ್ಷ, ಕೆಲ ಸದಸ್ಯರು ಹಾಗೂ ಕೆಪಿಎಸ್ಸಿ ಕಾರ್ಯದರ್ಶಿ ಕೆ.ಎಸ್. ಲತಾ ಕುಮಾರಿ ಅವರ ನಡುವೆ ನಡೆಯುತ್ತಿರುವ ಕಿತ್ತಾಟದ ಮಧ್ಯೆಯೇ ಸರ್ಕಾರ ಲತಾಕುಮಾರಿ ಅವರಿಗೆ ೧೦ ದಿನ ಗಳಿಕೆ ರಜೆ ಮಂಜೂರು ಮಾಡಿದೆ. ಈ ಕುರಿತು ಡಿಪಿಎಆರ್ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ.
ಕೆ.ಎಸ್. ಲತಾಕುಮಾರಿ ಅವರಿಗೆ ಫೆ.7 ರಿಂದ 17ರವರೆಗೆ ಗಳಿಕೆ ರಜೆ ನೀಡಲಾಗಿದೆ. ಅವರ ರಜೆ ಅವಧಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ರಾಕೇಶಕುಮಾರ ಕೆ ಅವರನ್ನು ಕೆಪಿಎಸ್ಸಿ ಪ್ರಭಾರಿ ಕಾರ್ಯದರ್ಶಿಯನ್ನಾಗಿ ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ.
ಕೆಪಿಎಸ್ಸಿಯ ನೇಮಕಾತಿ ಪ್ರಕ್ರಿಯೆಗಳಿಗೆ ಸಂಬಂಧಪಟ್ಟಂತೆ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ, ಕೆಲ ಸದಸ್ಯರು ಮತ್ತು ಲತಾಕುಮಾರಿ ಅವರ ನಡುವೆ ತಿಕ್ಕಾಟ ನಡೆಯುತ್ತಿದೆ ಎಂದು ಹೇಳಲಾಗಿದ್ದು,ಈಗ ಕಾರ್ಯದರ್ಶಿಗೆ ರಜೆ ಮಂಜೂರು ಮಾಡಿ ಕಳುಹಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ