ವೀಡಿಯೊ…| ಬೆಂಗಳೂರು ಬಿಎಂಟಿಸಿ ಬಸ್ಸಿನಲ್ಲಿ ಕಿಟಕಿ ತೆರೆದ ಬಗ್ಗೆ ನಡೆದ ವಾಗ್ವಾದದ ನಂತರ ಚಪ್ಪಲಿಯಿಂದ ಹೊಡೆದಾಡಿಕೊಂಡ ಇಬ್ಬರು ಮಹಿಳೆಯರು…!

ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ಸಿನಲ್ಲಿ ಇತ್ತೀಚೆಗೆ ಆಘಾತಕಾರಿ ಘಟನೆ ನಡೆದಿರುವುದು ವರದಿಯಾಗಿದೆ.
ವೈರಲ್ ದೃಶ್ಯಗಳಲ್ಲಿ, ಇಬ್ಬರು ಮಹಿಳಾ ಪ್ರಯಾಣಿಕರು ತೀವ್ರ ಘರ್ಷಣೆಯಲ್ಲಿ ತೊಡಗಿರುವುದು ಕಂಡುಬರುತ್ತದೆ, ಅದು ನಂತರ ದೈಹಿಕ ವಾಗ್ವಾದಕ್ಕೆ ತಿರುಗುತ್ತದೆ. ನಂತರ ಮಹಿಳೆಯರಿಬ್ಬರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಳ್ಳುವುದು ಕಂಡುಬರುತ್ತದೆ. ಮೆಜೆಸ್ಟಿಕ್‌ನಿಂದ ಪೀಣ್ಯಕ್ಕೆ ತೆರಳುತ್ತಿದ್ದ ಬಸ್‌ ನಲ್ಲಿ ಈ ಘಟನೆ ನಡೆದಿದ್ದು, ರಾಜಾಜಿನಗರ ಪೊಲೀಸ್‌ ಠಾಣೆಯ ಬಸ್‌ ನಿಲ್ದಾಣದ ಬಳಿ ಇಬ್ಬರೂ ಪ್ರಯಾಣಿಕರು ಮಹಿಳಾ ಪ್ರಯಾಣಿಕರು ಹೊಡೆದಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸದ್ಯಕ್ಕೆ, ಘಟನೆಯ ನಿಖರವಾದ ದಿನಾಂಕ ತಿಳಿದಿಲ್ಲ.

ಮಹಿಳೆಯರು ಹೊಡೆದಾಡಿಕೊಳ್ಳುತ್ತಿರುವಾಗ ಸಹ ಪ್ರಯಾಣಿಕರು ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸಸುತ್ತಿರುವುದು ಕಂಡುಬರುತ್ತದೆ. ಆದರೂ ಜಗಳ ಉಲ್ಬಣಗೊಂಡಿತು. ಈ ವಿಲಕ್ಷಣ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಬಹುಬೇಗ ವೈರಲ್ ಆಗಿತ್ತು.
ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ನಲ್ಲಿ ಮಹಿಳೆಯೊಬ್ಬರು ಕಿಟಕಿ ತೆರೆದಾಗ ವಾಗ್ವಾದ ಪ್ರಾರಂಭವಾಯಿತು. ಯಾಕೆಂದರೆ ಅವರು ಕಿಟಿಕಿ ತೆಗೆದಿದ್ದಕ್ಕೆ ಮತ್ತೊಬ್ಬರು ಆಕ್ಷೇಪಿಸಿದರು. ಕಿಟಕಿ ತೆಗೆದರೆ ತಮಗೆ ತೊಂದರೆಯಾಗುತ್ತದೆ ಎಂದು ಮತ್ತೊಬ್ಬ ಮಹಿಳೆ ಆಕ್ಷೇಪಿಸಿದ ನಂತರ ಜಗಳ ಪ್ರಾರಂಭವಾಯಿತು ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಎಸ್‌ಐಟಿ ನೋಟಿಸ್​: ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ಪ್ರಜ್ವಲ್‌ ; ಪತ್ರದಲ್ಲೇನಿದೆ..?

ಇಬ್ಬರೂ ಮಹಿಳೆಯರು ಚಪ್ಪಲಿ ತೆಗೆದುಕೊಂಡ ನಂತರ ಬಸ್ಸಿನಲ್ಲಿದ್ದ ಪ್ರಯಾಣಿಕರು ಮಧ್ಯಪ್ರವೇಶಿಸಿ ಇಬ್ಬರನ್ನು ಬಸ್ಸಿನಿಂದ ಕೆಳಗಿಳಿಸುವಂತೆ ಬಸ್‌ ಕಂಡಕ್ಟರ್‌ ಅವರಿಗೆ ಒತ್ತಾಯಿಸಿದರು. ಕೊನೆಗೆ ಕಂಡಕ್ಟರ್ ಇಬ್ಬರೂ ಮಹಿಳೆಯರಿಗೆ ಬಸ್‌ನಿಂದ ಇಳಿಯಲು ಸೂಚಿಸಿದರು ಎಂದು ವರದಿಯಾಗಿದೆ.
ರಾಜ್ಯ ಸರ್ಕಾರವು ಶಕ್ತಿ ಯೋಜನೆಯಡಿ ಸಾಮಾನ್ಯ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುಮತಿಸಿದ ನಂತರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳಕ್ಕೆ ಸಾಕ್ಷಿಯಾಗಿದೆ. ಅದರ ಜೊತೆಗೆ ಇಂತಹ ಘಟನೆಗಳು ಸಹ ಸಂಭವಿಸುತ್ತಿವೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement